ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಪೂಜಾರಿ ಕೃಷ್ಣ ಎಂಬುವರಿಗೆ ಸೇರಿದ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಮನೆಯವರು ಜಮೀನಿಗೆ ತೆರಳಿದ್ದ ಕಾರಣ ಯಾರೂ ಮನೆಯಲ್ಲಿರಲಿಲ್ಲ. ಮನೆಗೆ ಹೊತ್ತಿ ಉರಿದ ಬೆಂಕಿಯಿಂದ ಮನೆಯೊಳಗಿದ್ದ ನಗದು ಹಣ, ಚಿನ್ನಾಭರಣಗಳು, ಬಟ್ಟೆಗಳು ಹಾಗೂ ಪೀಠೋಪಕರಣಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಘಟನೆಯಿಂದ ಮನೆ ಸಂಪೂರ್ಣ ಹಾನಿಗೊಳಗಾಗಿದ್ದು, ಸರ್ವಸ್ವ ಕಳೆದುಕೊಂಡ ಕುಟುಂಬ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…