ಮಂಡ್ಯ

ಕಾಣೆಯಾದ ಮಕ್ಕಳ ವಿಶೇಷ ಕಾರ್ಯಪಡೆ ಸಮಿತಿ ಸಭೆ : ಜಿಲ್ಲಾ ಮಟ್ಟದಲ್ಲಿ ವಿಶೇಷ ಆಂದೋಲನ ಆಯೋಜಿಸಲು ಎಸ್ಪಿ ಸಲಹೆ

ಮಂಡ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಕಾಣೆಯಾದ ಮಕ್ಕಳ ಪ್ರಕರಣಗಳ ಪತ್ತೆ ಕುರಿತು ‘ಕಾಣೆಯಾದ ಮಕ್ಕಳ ವಿಶೇಷ ಕಾರ್ಯಪಡೆ ಸಮಿತಿ’ ಸಭೆಯ ಪ್ರಗತಿ ಪರಿಶೀಲನಾ ಸಭೆಯು ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಿತಿಯು ಪ್ರತಿ ತಿಂಗಳೂ ಸಭೆ ಕರೆದು ಜಿಲ್ಲೆಯಲ್ಲಿ ದಾಖಲಾದ ಮಕ್ಕಳ ಅಪಹರಣ ಮತ್ತು ಕಾಣೆಯಾದ ಮಕ್ಕಳ ಪ್ರಕರಣಗಳನ್ನು ಪರಿಶೀಲಿಸುವುದು, ಕಾಣೆಯಾದ ಮಕ್ಕಳ ಪೋಷಕರನ್ನು ಕರೆದು ದೂರಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡು ಮಗುವಿನ ಪತ್ತೆಗೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗದ ಪ್ರಕರಣಗಳ ಕುರಿತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಆಂದೋಲನವನ್ನು ಆಯೋಜಿಸಿ ಅನುಪಾಲನಾ ಮಾಡಬೇಕೆಂದು ಜಿಲ್ಲೆಯಲ್ಲಿನ ಎಲ್ಲ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆನಂದ್ ಮಾತನಾಡಿ, ಅಪಹರಣ ಮತ್ತು ಕಾಣೆಯಾದ ಮಕ್ಕಳ ಕಳ್ಳ ಸಾಗಾಣಿಕೆ ಕುರಿತಂತೆ ಸ್ವ-ಸಹಾಯ ಗುಂಪುಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಪೊಲೀಸ್ ಇಲಾಖೆಯು ಮಕ್ಕಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೀಘ್ರವಾಗಿ ಪತ್ತೆ ಮಾಡಿ ಪೋಷಕರ ವಶಕ್ಕೆ ನೀಡಬೇಕೆಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ರಶ್ಮಿ ಮಾತನಾಡಿ, ಕಾಣೆಯಾದ ಮಕ್ಕಳು ಸಾರ್ವಜನಿಕರಿಗೆ ಅಥವಾ ಮಕ್ಕಳ ಸಹಾಯವಾಣಿ, ಪೊಲೀಸ್ ಅವರಿಂದ ಬಾಲಮಂದಿರಕ್ಕೆ ದಾಖಲಾದ ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿ ಮಗುವಿನ ಮಾಹಿತಿಯನ್ನು ಪಡೆದುಕೊಂಡು ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸಿ ಸಂಬಂಧಪಟ್ಟ ಪೋಷಕರ ವಶಕ್ಕೆ ಅಥವಾ ಸಂಬಂಧಪಟ್ಟ ಜಿಲ್ಲೆ ಮತ್ತು ರಾಜ್ಯಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಮಿತಿ ಸದಸ್ಯರಾದ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ಬಾಲ ನ್ಯಾಯ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

5 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

5 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

5 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

5 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

5 hours ago