ಮಂಡ್ಯ

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಪರಿಶೀಲನಾ ಸಭೆಯನ್ನು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ನಡೆಸಿದರು.

ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವಿದ್ಯಾರ್ಥಿಯು 90 ದಿನಗಳಲ್ಲಿ ಕನಿಷ್ಟ 40 ಅಂಕಗಳನ್ನು ಪಡೆಯುವಂತೆ ಮಾಡಲು ಕ್ರಮವಹಿಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಫಲಿತಾಂಶ ಉತ್ತಮಗೊಳಿಸಲು ನೇಮಕ ಮಾಡಲಾಗಿರುವ 56 ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.

ಡಿಸೆಂಬರ್ 18,19,&20ನೇ ತಾರೀಖುಗಳಂದು ಜಿಲ್ಲೆಯ ಎಲ್ಲಾ ಹೈಸ್ಕೂಲ್ ಗಳಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 40 ಅಂಕಗಳಿಗೆ ಅಭ್ಯಾಸ ಪರೀಕ್ಷೆ ನೀಡುವಂತೆ ಸೂಚಿಸಲಾಗಿದ್ದು, ಸದರಿ ಪರೀಕ್ಷೆಯಲ್ಲಿ ಶೇಕಡ 50ಕ್ಕಿಂತ ಕಡಿಮೆ ಅಂಕ ಪಡೆದ 5221 ವಿದ್ಯಾರ್ಥಿಗಳಿಗೆ ಹೆಚ್ಚಿನ ವಿಶೇಷ ಗಮನ ಹರಿಸಿ ವಿಶೇಷ ತರಗತಿಗಳನ್ನು ತೆಗೆದುಕಳ್ಳುವಂತೆ ಸೂಚಿಸಲಾಗಿದೆ ಎಂದರು.

ಸಿ.ಎಸ್.ಆರ್. ಅನುದಾನದಡಿ ಮಕ್ಕಳಿಗೆ ನೋಟ್ ಬುಕ್ ವಿತರಣೆಗೆ ಕ್ರಮ
ಅಭ್ಯಾಸ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭ್ಯಾಸ ನಡೆಸಲು ನೋಟ್ ಬುಕ್ ಗಳ ಕೊರತೆ ಎದುರಾಗುತ್ತದೆಂಬ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಸಿ.ಎಸ್.ಆರ್. ಅನುದಾನದಡಿ ನೋಟ್ ಬುಕ್ ಗಳನ್ನು ಪಡೆದು ಶಾಲೆಗೆ ವಿತರಿಸಲು ಪ್ರಯತ್ನಿಸಲಾಗುವುದು ಎಂದು ಮಾಹಿತಿ ನೀಡಿದರು. ಈಗಾಗಲೇ ಕೆಲವು ಸಂಸ್ಥೆಗಳಿಗೆ ತಮ್ಮ ಸಿ.ಎಸ್.ಆರ್. ಅನುದಾನದಡಿ ನೋಟ್ ಬುಕ್ ಗಳನ್ನು ವಿತರಣೆ ಮಾಡುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದರು.

ಮೇಲ್ವಿಚಾರಣಾ ಸಮಿತಿ ರಚನೆ;
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರಾಂಶುಪಾಲರು, ಡಯಟ್, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಅಧಿಕಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆರವರನ್ನೊಳಗೊಂಡ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:-ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಕಾರ್ಯನಿರ್ವಾಹಕ ಅಧಿಕಾರಿಗಳು ಎಸ್.ಎಸ್,ಎಲ್.ಸಿ. ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಕಾಲ ಕಾಲಕ್ಕೆ ವರದಿ ನೀಡಬೇಕು ಹಾಗೂ ಫಲಿತಾಂಶ ಉತ್ತಮಗೊಳಿಸುವ ಸಂಬಂಧ ಗ್ರಾ.ಪಂ. ಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಅಗತ್ಯ ಸಹಕಾರ ನೀಡುವಂತೆ ನಿರ್ದೇಶನ ನೀಡಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಉತ್ತಮ ಫಲಿತಾಂಶ ಸಾಧನೆ ಮಾಡುವ ಬಿಇಓ, ಹೆಚ್.ಎಂ. ಮತ್ತು ನೋಡಲ್ ಅಧಿಕಾರಿಗಳಿಗೆ ಬಹುಮಾನ:
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಶಾಲೆಯ ಮುಖ್ಯೋಪದ್ಯಾಯರು, ನೋಡಲ್ ಅಧಿಕಾರಿಗಳು ಮತ್ತು ಬಿಇಓ ಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಸಿಇಓ ಅವರು ತಿಳಿಸಿದರು.

ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣದಲ್ಲಿ ಕಡಿಮೆ ಫಲಿತಾಂಶ:
ಅಭ್ಯಾಸ ಪರೀಕ್ಷೆಯಲ್ಲಿ ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಶಾಲೆಗಳಲ್ಲಿ ಶೇಕಡ 50ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇದ್ದು, ಈ ತಾಲ್ಲೂಕುಗಳಲ್ಲಿ ವಿಶೇಷ ಗಮನ ಹರಿಸುವಂತೆ ಸಿಇಓ ಅವರು ನೋಡಲ್ ಅಧಿಕಾರಿಗಳು ಮತ್ತು ಬಿಇಓ ಗಳಿಗೆ ಸೂಚಿಸಿದರು. ಮಂಡ್ಯ ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಉತ್ತಮ ಫಲಿತಾಂಶ ಬದ್ದಿದ್ದು, ಶೇಕಡ 90ಕ್ಕೆ ಪ್ರಗತಿಯನ್ನು ಹೆಚ್ಚಿಸುವಂತೆ ಸಂಬಂಧಪಟ್ಟ ಬಿಇಓ ಮತ್ತು ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.

ನಿವೃತ್ತ ಅಡುಗೆ ಸಿಬ್ಬಂದಿಗಳ ಇಡಿಗಂಟು ಮೊತ್ತವನ್ನು ಹೊಸ ವರ್ಷಕ್ಕೆ ನೇರವಾಗಿ ಜಮೆ ಮಾಡುವಂತೆ ಕ್ರಮವಹಿಸಲು ಸೂಚನೆ:
2022ನೇ ಸಾಲಿನಿಂದ ಬಾಕಿ ಉಳಿದಿದ್ದ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ 217 ಅಡುಗೆ ಸಿಬ್ಬಂದಿಗಳಿಗೆ 1 ಜನವರಿ 2026ರ ಹೊಸ ವರ್ಷದಂದು ಸರ್ಕಾರದ ನಿರ್ದೇಶನದಂತೆ ನೇರವಾಗಿ ಸಂಬಂಧಪಟ್ಟವರ ಖಾತೆಗೆ ಇಡಿಗಂಟು ಪಾವತಿಸಲು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು. ಬಿಸಿಯೂಟ ಸಿಬ್ಬಂದಿಗಳ ಹಿತಾಸಕ್ತಿ ರಕ್ಷಿಸುವ ನಿಟ್ಟಿನಲ್ಲಿ ಇದೆ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಲೋಕೇಶ್ ಜಿ, ಡಯಟ್ ಪ್ರಾಂಶುಪಾಲರಾದ ಯೋಗೇಶ್, ಮಧ್ಯಾಹ್ನದ ಬಿಸಿಯೂಟ ಯೋಜನೆಯ ಶಿಕ್ಷಣಾಧಿಕಾರಿ ರವಿಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

1 hour ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

1 hour ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

3 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago