ಮಂಡ್ಯ

ನಟ ದರ್ಶನ್‌ಗೆ ಸಲಹೆ ನೀಡಿದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ; ಏನದು…?

ಮಂಡ್ಯ : ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಕೆಟ್ಟ ಸಂದೇಶ ಹಾಕದಂತೆ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಸಲಹೆ ಕೊಟ್ಟರೆ ಒಳ್ಳೆಯದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ದರ್ಶನ್ ಅಭಿಮಾನಿಗಳು ನಟಿ ರಮ್ಯಾಗೆ ಕೆಟ್ಟ ಸಂದೇಶ ಕಳುಹಿಸಿರುವ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಶಿಕ್ಷೆ ಆಗುತ್ತದೆ. ಯಾರೂ ಕೂಡ ತಪ್ಪಿಸಿಕೊಳ್ಳಲು ಆಗಲ್ಲ. ನ್ಯಾಯಾಲಯದ ಮುಂದೆ ಯಾರೂ ದೊಡ್ಡವರಲ್ಲ. ಸುಮ್ಮನೆ ಮಾತನಾಡಿದರೆ ವ್ಯರ್ಥ ಎಂದರು.

ಕಮೆಂಟ್ ಮಾಡಿ ಅವರ ಬಗ್ಗೆ ಇವರ ಬಗ್ಗೆ ಬೈದುಕೊಂಡು ಇದ್ದರೆ ಏನೂ ಆಗಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರುತ್ತದೆ ಕಾದು ನೋಡಬೇಕು. ಅನಗತ್ಯ ಕಮೆಂಟ್‌ಗಳನ್ನು ಮಾಡುವುದು ಬೇಡ. ಈ ಬಗ್ಗೆ ಅಭಿಮಾನಿಗಳಿಗೆ ಹೇಳಲು ದರ್ಶನ್ ಜತೆ ಮಾತನಾಡುತ್ತೇನೆ ಎಂದು ತಿಳಿಸಿದರು.

ದರ್ಶನ್ ತಮ್ಮ ಅಭಿಮಾನಿಗಳಿಗೆ ಸಲಹೆ ಕೊಟ್ಟರೆ ಒಳ್ಳೆಯದು. ಸಲಹೆ ಕೊಡಲಿಲ್ಲ ಅಂದರೆ ಹೀಗೇ ಜಿದ್ದಾ ಜಿದ್ದಿ ನಡೆಯುತ್ತದೆ. ಎಲ್ಲ ವಿಚಾರದಲ್ಲೂ ಪಾಸಿಟಿವ್, ನೆಗೆಟಿವ್ ಇರುತ್ತದೆ. ಸಾಮಾಜಿಕ ಜಾಲತಾಣವನ್ನು ಪಾಸಿಟಿವ್ ಆಗಿ ಬಳಕೆ ಮಾಡಿಕೊಳ್ಳಬೇಕು. ಸರ್ಕಾರವೂ ಕೂಡ ಪರಿಣಾಮಕಾರಿಯಾಗಿ ಬಳಕೆ ಮಾಡುವುದರ ಬಗ್ಗೆ ಹೇಳಬೇಕಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

13 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

13 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

13 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

13 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

13 hours ago