Darshan Puttannaiah
ಮಂಡ್ಯ : ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಕೆಟ್ಟ ಸಂದೇಶ ಹಾಕದಂತೆ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಸಲಹೆ ಕೊಟ್ಟರೆ ಒಳ್ಳೆಯದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ದರ್ಶನ್ ಅಭಿಮಾನಿಗಳು ನಟಿ ರಮ್ಯಾಗೆ ಕೆಟ್ಟ ಸಂದೇಶ ಕಳುಹಿಸಿರುವ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಶಿಕ್ಷೆ ಆಗುತ್ತದೆ. ಯಾರೂ ಕೂಡ ತಪ್ಪಿಸಿಕೊಳ್ಳಲು ಆಗಲ್ಲ. ನ್ಯಾಯಾಲಯದ ಮುಂದೆ ಯಾರೂ ದೊಡ್ಡವರಲ್ಲ. ಸುಮ್ಮನೆ ಮಾತನಾಡಿದರೆ ವ್ಯರ್ಥ ಎಂದರು.
ಕಮೆಂಟ್ ಮಾಡಿ ಅವರ ಬಗ್ಗೆ ಇವರ ಬಗ್ಗೆ ಬೈದುಕೊಂಡು ಇದ್ದರೆ ಏನೂ ಆಗಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರುತ್ತದೆ ಕಾದು ನೋಡಬೇಕು. ಅನಗತ್ಯ ಕಮೆಂಟ್ಗಳನ್ನು ಮಾಡುವುದು ಬೇಡ. ಈ ಬಗ್ಗೆ ಅಭಿಮಾನಿಗಳಿಗೆ ಹೇಳಲು ದರ್ಶನ್ ಜತೆ ಮಾತನಾಡುತ್ತೇನೆ ಎಂದು ತಿಳಿಸಿದರು.
ದರ್ಶನ್ ತಮ್ಮ ಅಭಿಮಾನಿಗಳಿಗೆ ಸಲಹೆ ಕೊಟ್ಟರೆ ಒಳ್ಳೆಯದು. ಸಲಹೆ ಕೊಡಲಿಲ್ಲ ಅಂದರೆ ಹೀಗೇ ಜಿದ್ದಾ ಜಿದ್ದಿ ನಡೆಯುತ್ತದೆ. ಎಲ್ಲ ವಿಚಾರದಲ್ಲೂ ಪಾಸಿಟಿವ್, ನೆಗೆಟಿವ್ ಇರುತ್ತದೆ. ಸಾಮಾಜಿಕ ಜಾಲತಾಣವನ್ನು ಪಾಸಿಟಿವ್ ಆಗಿ ಬಳಕೆ ಮಾಡಿಕೊಳ್ಳಬೇಕು. ಸರ್ಕಾರವೂ ಕೂಡ ಪರಿಣಾಮಕಾರಿಯಾಗಿ ಬಳಕೆ ಮಾಡುವುದರ ಬಗ್ಗೆ ಹೇಳಬೇಕಿದೆ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…