ಮಂಡ್ಯ

ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್‌ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರೋಧ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ವಿರುದ್ಧ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಆರ್‌ಎಸ್‌ ಕೊನೆಯ ಭಾಗದ ರೈತರಿಗೆ ನಾಲೆಗಳಲ್ಲಿ ನೀರು ತಲುಪುತ್ತಿಲ್ಲ. ಮೊದಲು ಇದನ್ನು ಸರಿಪಡಿಸಬೇಕು. ಡ್ಯಾಂ ಸುರಕ್ಷತೆ ಬಗ್ಗೆ ಎಲ್ಲರಿಗೂ ಕಾಳಜಿ ಇದೆ. ಕೆಆರ್‌ಎಸ್‌ ಡ್ಯಾಂ ಇದ್ರೆ ನಾವು ಬದುಕುತ್ತೇವೆ, ಬೆಂಗಳೂರಿನವರು ಬದುಕುತ್ತಾರೆ ಎಂದರು.

ಇನ್ನು ಕೆಆರ್‌ಎಸ್ ಸುತ್ತಮುತ್ತಲಿನಲ್ಲಿ ರೈತರ ಭೂಮಿ ಇದೆ.‌ ರೈತರಿಗೆ ಆತಂಕ ಇದೆ. ರಾಜ್ಯ ಸರ್ಕಾರ ನಾಲೆಗಳ ಅಭಿವೃದ್ಧಿಗೆ ದುಡ್ಡು ಕೊಡಲಿ. ಮೇಲುಕೋಟೆ ಸುತ್ತಮುತ್ತಲಿನಲ್ಲಿ ಡ್ರೈಲ್ಯಾಂಡ್ ಇದ್ದು, ನಾವು ಮೇಲುಕೋಟೆ ದೇವಸ್ಥಾನವನ್ನು ಅಭಿವೃದ್ಧಿ ಮಾಡಿ ಆರ್ಥಿಕತೆ ಹೆಚ್ಚಾಗುತ್ತೆ ಎಂದು ಯೋಚನೆ ಮಾಡ್ತೇವೆ. ಆದರೆ ಕೆಆರ್‌ಎಸ್ ಜಲಾಶಯದ ಸುತ್ತಮುತ್ತಲಿನಲ್ಲಿ ರೈತರ ನೀರಾವರಿ ಜಮೀನು ಇದೆ.‌ ಹೀಗಾಗಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡ್ಯಾಂಗೆ ಯಾವುದೇ ರೀತಿಯಲ್ಲೂ ಧಕ್ಕೆ ಬರದ ಹಾಗೆ ನೋಡಿಕೊಳ್ಳಬೇಕು. ಯೋಜನೆ ತರುವ ಮುನ್ನ ಎಲ್ಲರನ್ನು ಗಣನೆಗೆ ತೆಗೆದುಕೊಂಡು ಚರ್ಚೆ ಮಾಡಬೇಕು. ರೈತರು ಉದ್ದೇಶ ಪೂರ್ವಕವಾಗಿ ವಿರೋಧ ಮಾಡ್ತಿಲ್ಲ. ಸರ್ಕಾರ ಒಂದು ಬಾರಿ ಜನರಿಗೆ ಮಾಹಿತಿ ಕೊಟ್ಟು ಚರ್ಚೆ ಮಾಡಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

8 mins ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

36 mins ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

47 mins ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

1 hour ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

5 hours ago