ಮಂಡ್ಯ

ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್‌ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರೋಧ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ವಿರುದ್ಧ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಆರ್‌ಎಸ್‌ ಕೊನೆಯ ಭಾಗದ ರೈತರಿಗೆ ನಾಲೆಗಳಲ್ಲಿ ನೀರು ತಲುಪುತ್ತಿಲ್ಲ. ಮೊದಲು ಇದನ್ನು ಸರಿಪಡಿಸಬೇಕು. ಡ್ಯಾಂ ಸುರಕ್ಷತೆ ಬಗ್ಗೆ ಎಲ್ಲರಿಗೂ ಕಾಳಜಿ ಇದೆ. ಕೆಆರ್‌ಎಸ್‌ ಡ್ಯಾಂ ಇದ್ರೆ ನಾವು ಬದುಕುತ್ತೇವೆ, ಬೆಂಗಳೂರಿನವರು ಬದುಕುತ್ತಾರೆ ಎಂದರು.

ಇನ್ನು ಕೆಆರ್‌ಎಸ್ ಸುತ್ತಮುತ್ತಲಿನಲ್ಲಿ ರೈತರ ಭೂಮಿ ಇದೆ.‌ ರೈತರಿಗೆ ಆತಂಕ ಇದೆ. ರಾಜ್ಯ ಸರ್ಕಾರ ನಾಲೆಗಳ ಅಭಿವೃದ್ಧಿಗೆ ದುಡ್ಡು ಕೊಡಲಿ. ಮೇಲುಕೋಟೆ ಸುತ್ತಮುತ್ತಲಿನಲ್ಲಿ ಡ್ರೈಲ್ಯಾಂಡ್ ಇದ್ದು, ನಾವು ಮೇಲುಕೋಟೆ ದೇವಸ್ಥಾನವನ್ನು ಅಭಿವೃದ್ಧಿ ಮಾಡಿ ಆರ್ಥಿಕತೆ ಹೆಚ್ಚಾಗುತ್ತೆ ಎಂದು ಯೋಚನೆ ಮಾಡ್ತೇವೆ. ಆದರೆ ಕೆಆರ್‌ಎಸ್ ಜಲಾಶಯದ ಸುತ್ತಮುತ್ತಲಿನಲ್ಲಿ ರೈತರ ನೀರಾವರಿ ಜಮೀನು ಇದೆ.‌ ಹೀಗಾಗಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡ್ಯಾಂಗೆ ಯಾವುದೇ ರೀತಿಯಲ್ಲೂ ಧಕ್ಕೆ ಬರದ ಹಾಗೆ ನೋಡಿಕೊಳ್ಳಬೇಕು. ಯೋಜನೆ ತರುವ ಮುನ್ನ ಎಲ್ಲರನ್ನು ಗಣನೆಗೆ ತೆಗೆದುಕೊಂಡು ಚರ್ಚೆ ಮಾಡಬೇಕು. ರೈತರು ಉದ್ದೇಶ ಪೂರ್ವಕವಾಗಿ ವಿರೋಧ ಮಾಡ್ತಿಲ್ಲ. ಸರ್ಕಾರ ಒಂದು ಬಾರಿ ಜನರಿಗೆ ಮಾಹಿತಿ ಕೊಟ್ಟು ಚರ್ಚೆ ಮಾಡಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

15 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

4 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 hours ago