ಮಂಡ್ಯ

ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್‌ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರೋಧ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ವಿರುದ್ಧ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಆರ್‌ಎಸ್‌ ಕೊನೆಯ ಭಾಗದ ರೈತರಿಗೆ ನಾಲೆಗಳಲ್ಲಿ ನೀರು ತಲುಪುತ್ತಿಲ್ಲ. ಮೊದಲು ಇದನ್ನು ಸರಿಪಡಿಸಬೇಕು. ಡ್ಯಾಂ ಸುರಕ್ಷತೆ ಬಗ್ಗೆ ಎಲ್ಲರಿಗೂ ಕಾಳಜಿ ಇದೆ. ಕೆಆರ್‌ಎಸ್‌ ಡ್ಯಾಂ ಇದ್ರೆ ನಾವು ಬದುಕುತ್ತೇವೆ, ಬೆಂಗಳೂರಿನವರು ಬದುಕುತ್ತಾರೆ ಎಂದರು.

ಇನ್ನು ಕೆಆರ್‌ಎಸ್ ಸುತ್ತಮುತ್ತಲಿನಲ್ಲಿ ರೈತರ ಭೂಮಿ ಇದೆ.‌ ರೈತರಿಗೆ ಆತಂಕ ಇದೆ. ರಾಜ್ಯ ಸರ್ಕಾರ ನಾಲೆಗಳ ಅಭಿವೃದ್ಧಿಗೆ ದುಡ್ಡು ಕೊಡಲಿ. ಮೇಲುಕೋಟೆ ಸುತ್ತಮುತ್ತಲಿನಲ್ಲಿ ಡ್ರೈಲ್ಯಾಂಡ್ ಇದ್ದು, ನಾವು ಮೇಲುಕೋಟೆ ದೇವಸ್ಥಾನವನ್ನು ಅಭಿವೃದ್ಧಿ ಮಾಡಿ ಆರ್ಥಿಕತೆ ಹೆಚ್ಚಾಗುತ್ತೆ ಎಂದು ಯೋಚನೆ ಮಾಡ್ತೇವೆ. ಆದರೆ ಕೆಆರ್‌ಎಸ್ ಜಲಾಶಯದ ಸುತ್ತಮುತ್ತಲಿನಲ್ಲಿ ರೈತರ ನೀರಾವರಿ ಜಮೀನು ಇದೆ.‌ ಹೀಗಾಗಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡ್ಯಾಂಗೆ ಯಾವುದೇ ರೀತಿಯಲ್ಲೂ ಧಕ್ಕೆ ಬರದ ಹಾಗೆ ನೋಡಿಕೊಳ್ಳಬೇಕು. ಯೋಜನೆ ತರುವ ಮುನ್ನ ಎಲ್ಲರನ್ನು ಗಣನೆಗೆ ತೆಗೆದುಕೊಂಡು ಚರ್ಚೆ ಮಾಡಬೇಕು. ರೈತರು ಉದ್ದೇಶ ಪೂರ್ವಕವಾಗಿ ವಿರೋಧ ಮಾಡ್ತಿಲ್ಲ. ಸರ್ಕಾರ ಒಂದು ಬಾರಿ ಜನರಿಗೆ ಮಾಹಿತಿ ಕೊಟ್ಟು ಚರ್ಚೆ ಮಾಡಲಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

8 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

8 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

18 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

19 hours ago