ಮಂಡ್ಯ : ಶಾಸಕ ಗಣಿಗ ರವಿಕುಮಾರ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಉದ್ಯಮಿ ಅಶೋಕ್ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಈ ಸಂಬಂಧ ಜನಪ್ರತಿನಿಧಿ ನ್ಯಾಯಾಲಯಕ್ಕೆ ರವಿ ಹಾಜರಾಗಿದ್ದರು.
೨೦೧೩ರಲ್ಲಿ ನೈಸ್ ರಸ್ತೆಗೆ ಸಂಬಂಧಿಸಿದಂತೆ ಜೆಡಿಎಸ್ನಿಂದ ಬೃಹತ್ ಪರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆಚ್.ಡಿ.ದೇವೇಗೌಡರ ಜೊತೆ ಗಣಿಗ ರವಿಕುಮಾರ್ ಕೂಡ ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ರವಿ ಕುಮಾರ್ ಅಶೋಕ್ ಖೇಣಿ ಮೇಲೆ ಹಲ್ಲೆಗೆಯತ್ನಿಸಿದ್ದಾರೆ ಎಂದು ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು.
ಈ ಸಂಬಂಧ ಮ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗಲು ಎಷ್ಟೇ ಆದೇಶ ಬಂದಿದ್ದರು ರವಿ ಕುಮಾರ್ ನಿರಾಕರಿಸಿದ್ದರು. ಈ ಬಾರಿ ನಾನ್ ಬೇಲ್ಎಬಲ್ ವಾರೆಂಟ್ ನೀಡಲಾಗಿತ್ತು.
ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ರವಿಕುಮಾರ್ ಅವರನ್ನು ಪೊಲೀಸರ ವಶಕ್ಕೆ ಪಡೆಯುವಂತೆ ನ್ಯಾಯಾಲಯ ಆದೇಶ ಮಾಡಿದೆ. ಆದೇಶದ ಮೇರೆಗೆ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…