ಮಂಡ್ಯ : ಶಾಸಕ ಗಣಿಗ ರವಿಕುಮಾರ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಉದ್ಯಮಿ ಅಶೋಕ್ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಈ ಸಂಬಂಧ ಜನಪ್ರತಿನಿಧಿ ನ್ಯಾಯಾಲಯಕ್ಕೆ ರವಿ ಹಾಜರಾಗಿದ್ದರು.
೨೦೧೩ರಲ್ಲಿ ನೈಸ್ ರಸ್ತೆಗೆ ಸಂಬಂಧಿಸಿದಂತೆ ಜೆಡಿಎಸ್ನಿಂದ ಬೃಹತ್ ಪರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆಚ್.ಡಿ.ದೇವೇಗೌಡರ ಜೊತೆ ಗಣಿಗ ರವಿಕುಮಾರ್ ಕೂಡ ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ರವಿ ಕುಮಾರ್ ಅಶೋಕ್ ಖೇಣಿ ಮೇಲೆ ಹಲ್ಲೆಗೆಯತ್ನಿಸಿದ್ದಾರೆ ಎಂದು ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು.
ಈ ಸಂಬಂಧ ಮ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗಲು ಎಷ್ಟೇ ಆದೇಶ ಬಂದಿದ್ದರು ರವಿ ಕುಮಾರ್ ನಿರಾಕರಿಸಿದ್ದರು. ಈ ಬಾರಿ ನಾನ್ ಬೇಲ್ಎಬಲ್ ವಾರೆಂಟ್ ನೀಡಲಾಗಿತ್ತು.
ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ರವಿಕುಮಾರ್ ಅವರನ್ನು ಪೊಲೀಸರ ವಶಕ್ಕೆ ಪಡೆಯುವಂತೆ ನ್ಯಾಯಾಲಯ ಆದೇಶ ಮಾಡಿದೆ. ಆದೇಶದ ಮೇರೆಗೆ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…