ಮಂಡ್ಯ : ಶಾಸಕ ಗಣಿಗ ರವಿಕುಮಾರ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಉದ್ಯಮಿ ಅಶೋಕ್ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಈ ಸಂಬಂಧ ಜನಪ್ರತಿನಿಧಿ ನ್ಯಾಯಾಲಯಕ್ಕೆ ರವಿ ಹಾಜರಾಗಿದ್ದರು.
೨೦೧೩ರಲ್ಲಿ ನೈಸ್ ರಸ್ತೆಗೆ ಸಂಬಂಧಿಸಿದಂತೆ ಜೆಡಿಎಸ್ನಿಂದ ಬೃಹತ್ ಪರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆಚ್.ಡಿ.ದೇವೇಗೌಡರ ಜೊತೆ ಗಣಿಗ ರವಿಕುಮಾರ್ ಕೂಡ ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ರವಿ ಕುಮಾರ್ ಅಶೋಕ್ ಖೇಣಿ ಮೇಲೆ ಹಲ್ಲೆಗೆಯತ್ನಿಸಿದ್ದಾರೆ ಎಂದು ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು.
ಈ ಸಂಬಂಧ ಮ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗಲು ಎಷ್ಟೇ ಆದೇಶ ಬಂದಿದ್ದರು ರವಿ ಕುಮಾರ್ ನಿರಾಕರಿಸಿದ್ದರು. ಈ ಬಾರಿ ನಾನ್ ಬೇಲ್ಎಬಲ್ ವಾರೆಂಟ್ ನೀಡಲಾಗಿತ್ತು.
ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ರವಿಕುಮಾರ್ ಅವರನ್ನು ಪೊಲೀಸರ ವಶಕ್ಕೆ ಪಡೆಯುವಂತೆ ನ್ಯಾಯಾಲಯ ಆದೇಶ ಮಾಡಿದೆ. ಆದೇಶದ ಮೇರೆಗೆ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…