ಮಂಡ್ಯ

ಇಲವಾಲ ಸಂಪರ್ಕ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದ ಶಾಸಕ ರಮೇಶ್‌ ಬಾಬು

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ೧೮೦ ಕೋಟಿ ರೂ. ಅನುದಾನಲ್ಲಿ ರಸ್ತೆ ಅಭಿವೃದ್ಧಿ ಮಾಡಿದ್ದೇನೆ. ಅಗತ್ಯ ಇರುವ ರಸ್ತೆಗಳನ್ನು ಮೊದಲ ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕ್ಷೇತ್ರದಾದ್ಯಂತ ಇತರೆ ರಸ್ತೆಗಳ ಅಭಿವೃದ್ಧಿಗೂ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಹಂತ ಹಂತವಾಗಿ ಕ್ಷೇತ್ರದ ಎಲ್ಲ ರಸ್ತೆಗಳು, ವಿದ್ಯುತ್ ಹಾಗೂ ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಇದಕ್ಕೂ ಮುನ್ನ ಜೆಡಿಎಂ ಯೋಜನೆಯಡಿ ನೇರಳಕೆರೆಯಲ್ಲಿ ೬೫ ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರು, ೨೫ ಲಕ್ಷ ರೂ. ವೆಚ್ಚದಲ್ಲಿ ಪೈಪ್‌ಲೈನ್ ಕಾಮಗಾರಿ, ಮಾರಸಿಂಗನಹಳ್ಳಿಯಿಂದ ಗಾಮನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸ್ವಾಮಿಗೌಡ, ಯಜಮಾನ್ ವಿಷಕಂಠೇಗೌಡ, ಗ್ರಾಪಂ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷರಾದ ಬಿ.ವಿ.ಸುರೇಶ್, ಪುಟ್ಟರಾಜು, ಎಂ.ಬಿ.ಕುಮಾರ್, ತಾಪಂ ಮಾಜಿ ಸದಸ್ಯ ಮಹದೇವಸ್ವಾಮಿ, ಅರವಿಂದ, ರಜಿನಿಕಾಂತ್, ಮಂಜುನಾಥ್, ನಂಜಶೆಟ್ಟಿ, ಡೇರಿ ಅಧ್ಯಕ್ಷ ಬಾಬು, ಮುಖಂಡರಾದ ಕೆಆರ್‌ಎಸ್ ಮಂಜುನಾಥ್, ಜಸ್ವಂತ್ ಮಂಡಿತ್ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

7 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

7 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago