ಮಂಡ್ಯ

ಇಲವಾಲ ಸಂಪರ್ಕ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದ ಶಾಸಕ ರಮೇಶ್‌ ಬಾಬು

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ೧೮೦ ಕೋಟಿ ರೂ. ಅನುದಾನಲ್ಲಿ ರಸ್ತೆ ಅಭಿವೃದ್ಧಿ ಮಾಡಿದ್ದೇನೆ. ಅಗತ್ಯ ಇರುವ ರಸ್ತೆಗಳನ್ನು ಮೊದಲ ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕ್ಷೇತ್ರದಾದ್ಯಂತ ಇತರೆ ರಸ್ತೆಗಳ ಅಭಿವೃದ್ಧಿಗೂ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಹಂತ ಹಂತವಾಗಿ ಕ್ಷೇತ್ರದ ಎಲ್ಲ ರಸ್ತೆಗಳು, ವಿದ್ಯುತ್ ಹಾಗೂ ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಇದಕ್ಕೂ ಮುನ್ನ ಜೆಡಿಎಂ ಯೋಜನೆಯಡಿ ನೇರಳಕೆರೆಯಲ್ಲಿ ೬೫ ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರು, ೨೫ ಲಕ್ಷ ರೂ. ವೆಚ್ಚದಲ್ಲಿ ಪೈಪ್‌ಲೈನ್ ಕಾಮಗಾರಿ, ಮಾರಸಿಂಗನಹಳ್ಳಿಯಿಂದ ಗಾಮನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸ್ವಾಮಿಗೌಡ, ಯಜಮಾನ್ ವಿಷಕಂಠೇಗೌಡ, ಗ್ರಾಪಂ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷರಾದ ಬಿ.ವಿ.ಸುರೇಶ್, ಪುಟ್ಟರಾಜು, ಎಂ.ಬಿ.ಕುಮಾರ್, ತಾಪಂ ಮಾಜಿ ಸದಸ್ಯ ಮಹದೇವಸ್ವಾಮಿ, ಅರವಿಂದ, ರಜಿನಿಕಾಂತ್, ಮಂಜುನಾಥ್, ನಂಜಶೆಟ್ಟಿ, ಡೇರಿ ಅಧ್ಯಕ್ಷ ಬಾಬು, ಮುಖಂಡರಾದ ಕೆಆರ್‌ಎಸ್ ಮಂಜುನಾಥ್, ಜಸ್ವಂತ್ ಮಂಡಿತ್ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

7 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

8 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago