ಮಂಡ್ಯ

ಮದ್ದೂರು | ಪೌರಕಾರ್ಮಿಕರಿಗೆ ನಿರ್ಮಿಸಿರುವ ಮನೆಗಳನ್ನು ಉದ್ಘಾಟಿಸಿದ ಶಾಸಕ ಉದಯ

ಮದ್ದೂರು : ಪಟ್ಟಣದ ಸಿದ್ಧಾರ್ಥನಗರ ಬಡಾವಣೆಯ 7ನೇ ಕ್ರಾಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ ವತಿಯಿಂದ ಗೃಹ ಭಾಗ್ಯ ಯೋಜನೆಯಡಿ ಪುರಸಭೆಯ ಖಾಯಂ ಪೌರಕಾರ್ಮಿಕರಿಗೆ ಅಂದಾಜು 1.95 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 16 ಮನೆಗಳನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪ್ರಸ್ತುತ 16 ಮನೆಗಳನ್ನು ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಹಸ್ತಾಂತರಿಸಲಾಗಿದೆ. ಉಳಿದ 7 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಪೌರ ಕಾರ್ಮಿಕರಿಗೆ ವಿತರಣೆ ಮಾಡಲಾಗುವುದು ಎಂದರು.

ಪೌರ ಕಾರ್ಮಿಕರು ಇತರ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾಮಿರ್ಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ. ಇಡೀ ಪಟ್ಟಣವನ್ನು ಸ್ವಚ್ಛವಾಗಿಡಲು ದಿನನಿತ್ಯ ಶ್ರಮಿಸುತ್ತಿರುವ ಪೌರ ಕಾರ್ಮಿಕರು ಇತರ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ ಎಂದರು.

ರಾಮ್ ರಹೀಂ ನಗರ, ಚನ್ನೇಗೌಡ ಬಡಾವಣೆ ನಿವಾಸಿಗಳು ಹಲವು ವರ್ಷಗಳಿಂದ ವಾಸವಾಗಿದ್ದಾರೆ. ಇವರಿಗೆ ಹಕ್ಕು ಪತ್ರ ನೀಡಿಲ್ಲ ಇದಕ್ಕೆ ಅಧಿಕಾರಿಗಳ ಈ ಹಿಂದೆ ಇದ್ದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಈ ಬಗ್ಗೆ ನಾನು ಶೀಘ್ರದಲ್ಲೇ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಟಿ.ಎನ್.ನರಸಿಂಹಮೂರ್ತಿ ಇಇ ಆರ್.ಪ್ರತಾಪ್, ಎಇಇ ರಾಘವೇಂದ್ರ, ಪುರಸಭೆ ಅಧ್ಯಕ್ಷೆ ಕೆ.ಪಿ.ಕೋಕಿಲಾ ಅರುಣ್ ಕುಮಾರ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸಿದ್ದರಾಜು, ಪ್ರಮೀಳಾ, ಎಂ.ಬಿ.ಸಚ್ಚಿನ್, ಸುರೇಶ್ ಕುಮಾರ್, ಸುಮಿತ್ರಾ ರಮೇಶ್, ಸರ್ವಮಂಗಳ, ಕಮಲ್ ನಾಥ್, ಬಸವರಾಜು, ಪ್ರಭಾರ ಮುಖ್ಯಾಽಕಾರಿ ಶ್ರೀಧರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago