ಮಂಡ್ಯ: ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರವಿದೆ. ನಾವು ರೈತರ ನೆರವಿಗೆ ಧಾವಿಸಬೇಕು. ಹಲವು ಬಾರಿ ದೆಹಲಿ ದಂಡೆಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಪರಿಪರಿಯಾಗಿ ಬೇಡಿದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಲಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 27 ಮಂದಿ ಬಿಜೆಪಿ ಸಂಸದರೂ ರಾಜ್ಯದ ಜನಕ್ಕಾಗಿ ಯಾವತ್ತು ಮೋದಿಯವರನ್ನ ಪ್ರಶ್ನಿಸಿಲ್ಲ, ಇಂತಹ ಸಂಸದರು ನಮಗೆ ಬೇಕೇ ಎಂದು ಕಿಡಿಕಾರಿದರು.
ಬಿಜೆಪಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿಲ್ಲ. ಕೇಂದ್ರದ ಕೃಷಿ ಸಬ್ಸಿಡಿ ಕಡಿತವಾಗಿದೆ. ಬರದ ಬೇಗುದಿಗೆ ಸ್ಪಂದಿಸದ ಮೈತ್ರಿ ಪಕ್ಷಗಳ ನಡೆ ವಿರುದ್ಧ ಮತದಾರ ಜಾಗೃತನಾಗಿ, ಆ ಮೂಲಕ ಎನ್.ಡಿ.ಎ ನೇತೃತ್ವದ ಬಿಜೆಪಿಯನ್ನು ಜನರು ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಎಚ್.ಡಿ ಕುಮಾರಸ್ವಾಮಿ ಕುಟುಂಬ ರಾಜ್ಯದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದೆ. ಅಧಿಕಾರದಲ್ಲಿದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಶಾಶ್ವತ ಯೋಜನೆ ನೀಡದ ಕುಮಾರಸ್ವಾಮಿ ಅವರು ಸಂಸದರಾಗಿ ಏನು ಮಾಡಲು ಸಾಧ್ಯ ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದು, ಮತದಾರರು ಇದನ್ನು ಅರ್ಥೈಸಿಕೊಂಡು ಧರ್ಮ, ಜಾತಿ , ಸುಳ್ಳು ಹಾಗೂ ಭಾವನಾತ್ಮಕ ಮಾತುಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…