ಮಂಡ್ಯ: ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರವಿದೆ. ನಾವು ರೈತರ ನೆರವಿಗೆ ಧಾವಿಸಬೇಕು. ಹಲವು ಬಾರಿ ದೆಹಲಿ ದಂಡೆಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಪರಿಪರಿಯಾಗಿ ಬೇಡಿದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಲಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 27 ಮಂದಿ ಬಿಜೆಪಿ ಸಂಸದರೂ ರಾಜ್ಯದ ಜನಕ್ಕಾಗಿ ಯಾವತ್ತು ಮೋದಿಯವರನ್ನ ಪ್ರಶ್ನಿಸಿಲ್ಲ, ಇಂತಹ ಸಂಸದರು ನಮಗೆ ಬೇಕೇ ಎಂದು ಕಿಡಿಕಾರಿದರು.
ಬಿಜೆಪಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿಲ್ಲ. ಕೇಂದ್ರದ ಕೃಷಿ ಸಬ್ಸಿಡಿ ಕಡಿತವಾಗಿದೆ. ಬರದ ಬೇಗುದಿಗೆ ಸ್ಪಂದಿಸದ ಮೈತ್ರಿ ಪಕ್ಷಗಳ ನಡೆ ವಿರುದ್ಧ ಮತದಾರ ಜಾಗೃತನಾಗಿ, ಆ ಮೂಲಕ ಎನ್.ಡಿ.ಎ ನೇತೃತ್ವದ ಬಿಜೆಪಿಯನ್ನು ಜನರು ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಎಚ್.ಡಿ ಕುಮಾರಸ್ವಾಮಿ ಕುಟುಂಬ ರಾಜ್ಯದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದೆ. ಅಧಿಕಾರದಲ್ಲಿದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಶಾಶ್ವತ ಯೋಜನೆ ನೀಡದ ಕುಮಾರಸ್ವಾಮಿ ಅವರು ಸಂಸದರಾಗಿ ಏನು ಮಾಡಲು ಸಾಧ್ಯ ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದು, ಮತದಾರರು ಇದನ್ನು ಅರ್ಥೈಸಿಕೊಂಡು ಧರ್ಮ, ಜಾತಿ , ಸುಳ್ಳು ಹಾಗೂ ಭಾವನಾತ್ಮಕ ಮಾತುಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…
ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…
ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…