ಮಂಡ್ಯ: ರಾಜ್ಯದ 223 ತಾಲೂಕುಗಳಲ್ಲಿ ತೀವ್ರ ಬರವಿದೆ. ನಾವು ರೈತರ ನೆರವಿಗೆ ಧಾವಿಸಬೇಕು. ಹಲವು ಬಾರಿ ದೆಹಲಿ ದಂಡೆಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಪರಿಪರಿಯಾಗಿ ಬೇಡಿದರು ಕೇಂದ್ರ ಸರ್ಕಾರ ಬರ ಪರಿಹಾರ ನೀಡಲಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 27 ಮಂದಿ ಬಿಜೆಪಿ ಸಂಸದರೂ ರಾಜ್ಯದ ಜನಕ್ಕಾಗಿ ಯಾವತ್ತು ಮೋದಿಯವರನ್ನ ಪ್ರಶ್ನಿಸಿಲ್ಲ, ಇಂತಹ ಸಂಸದರು ನಮಗೆ ಬೇಕೇ ಎಂದು ಕಿಡಿಕಾರಿದರು.
ಬಿಜೆಪಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿಲ್ಲ. ಕೇಂದ್ರದ ಕೃಷಿ ಸಬ್ಸಿಡಿ ಕಡಿತವಾಗಿದೆ. ಬರದ ಬೇಗುದಿಗೆ ಸ್ಪಂದಿಸದ ಮೈತ್ರಿ ಪಕ್ಷಗಳ ನಡೆ ವಿರುದ್ಧ ಮತದಾರ ಜಾಗೃತನಾಗಿ, ಆ ಮೂಲಕ ಎನ್.ಡಿ.ಎ ನೇತೃತ್ವದ ಬಿಜೆಪಿಯನ್ನು ಜನರು ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಎಚ್.ಡಿ ಕುಮಾರಸ್ವಾಮಿ ಕುಟುಂಬ ರಾಜ್ಯದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದೆ. ಅಧಿಕಾರದಲ್ಲಿದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಶಾಶ್ವತ ಯೋಜನೆ ನೀಡದ ಕುಮಾರಸ್ವಾಮಿ ಅವರು ಸಂಸದರಾಗಿ ಏನು ಮಾಡಲು ಸಾಧ್ಯ ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.
ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದು, ಮತದಾರರು ಇದನ್ನು ಅರ್ಥೈಸಿಕೊಂಡು ಧರ್ಮ, ಜಾತಿ , ಸುಳ್ಳು ಹಾಗೂ ಭಾವನಾತ್ಮಕ ಮಾತುಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…