ಮಂಡ್ಯ

ಮೋದಿಯಿಂದ ಉನ್ನತ ರಾಷ್ಟ್ರದ ಗುರಿ ; ಪ್ರತಿಯೊಬ್ಬ ನಾಗರಿಕರು ಸಹಕಾರ ನೀಡಲು ಸಂಸದ ಯದುವೀರ್ ಮನವಿ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಮೂಲಕ ದೇಶವನ್ನು ಒಂದು ಉನ್ನತ ರಾಷ್ಟ್ರವನ್ನಾಗಿ ರೂಪಿಸುವ ಗುರಿ ಹೊಂದಿದ್ದಾರೆ. ಇದಕ್ಕೆ ಪ್ರತಿಯೊಬ್ಬ ನಾಗರಿಕರೂ ಸಹಕಾರ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.

ನಗರದ ನೂರಡಿ ರಸ್ತೆಯಲ್ಲಿ ನೂತನವಾಗಿ ಸ್ಥಾಪಿಸಿರುವ ಗೋಲ್ಡ್ ಜಿಮ್ ಉದ್ಘಾಟಿಸಿ ಮಾತನಾಡಿದ ಅವರು, ವಿಕಸಿತ ಭಾರತ ದೂರದೃಷ್ಟಿಯ ಕಲ್ಪನೆಯಾಗಿದೆ. ಇದು ಆರ್ಥಿಕ, ಸಾಮಾಜಿಕ ಮತ್ತು ತಾಂತ್ರಿಕ ಪ್ರಗತಿಯನ್ನು ಕೇಂದ್ರೀಕರಿಸುತ್ತದೆ. ಇದನ್ನು ಕೇವಲ ಕೇಂದ್ರ ಸರ್ಕಾರದಿಂದ ಮಾತ್ರ ಸಾಽಸಲಾಗದು, ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಭಾರತ ಕೃಷಿ, ಶಿಕ್ಷಣ, ಆರೋಗ್ಯ, ಉದ್ಯೋಗ, ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಬೇಕಾಗಿದೆ. ಜತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಜಿಮ್‌ಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.

ಇದನ್ನು ಓದಿ :  ಪತ್ರಕರ್ತರ ಉಚಿತ ಬಸ್‌ ಪಾಸ್‌ಗೆ ಅರ್ಜಿ ಆಹ್ವಾನ

ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ, ಸುಸ್ಥಿರ ಅಭಿವೃದ್ಧಿ, ರಾಸಾಯನಿಕ ಮುಕ್ತ ವಾತಾವರಣ, ಭ್ರಷ್ಟಾಚಾರ ರಹಿತ ಬದುಕು ಮತ್ತು ಉತ್ತಮ ಆಡಳಿತ, ಯಾವುದೇ ಭಾಷೆ, ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಂಘರ್ಷವಿಲ್ಲದೆ ಐಕ್ಯರಾಗುವಂತಹ ಸ್ವಾಸ್ತ್ಯ ಸಮಾಜವನ್ನು ನಿರ್ಮಾಣ ಮಾಡಬೇಕಿದೆ ಎಂದು ಹೇಳಿದರು.

ಆರೋಗ್ಯಕರ ಸಮಾಜ ಸೃಷ್ಟಿಸುವುದಕ್ಕೆ ಕೇಂದ್ರದಿಂದ ಅತ್ಯಂತ ಒಳ್ಳೆಯ ಕೆಲಸಗಳು ಆಗುತ್ತಿವೆ. ಇದು ಎಷ್ಟೇ ಆದರೂ ಸರ್ಕಾರದಿಂದ ಸಹಾಯ ಬಂದರೂ, ನಾಗರಿಕರ ಹೊಣೆಗಾರಿಕೆಯೂ ಮುಖ್ಯವಾಗುತ್ತದೆ. ಸ್ವಯಂ ಆಸಕ್ತಿಯಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕೆಂಬ ಮನೋಭಾವನೆಯು ಜನರಲ್ಲಿ ಬರಬೇಕು. ನನ್ನ ದೇಹಾರೋಗ್ಯವನ್ನು ನಾನೇ ಕಸರತ್ತು ಮಾಡುವ ಮೂಲಕ ಕಾಪಾಡಿಕೊಳ್ಳುತ್ತೇವೆಂಬ ಇಚ್ಚೆ ಬಂದಲ್ಲಿ ಮಾತ್ರ ಆರೋಗ್ಯಯುತ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು.

ಮಂಡ್ಯ ಮತ್ತು ಅರಮನೆಗೆ ಒಂದು ರೀತಿಯ ನಿಕಟ ಹಾಗೂ ಭಾವನಾತ್ಮಕ ಸಂಬಂಧ ಇದೆ. ಹಿಂದಿನಿಂದಲೂ ಒಂದು ಬಾಂಧವ್ಯ ವೃದ್ಧಿಯಾಗಿದೆ. ಆ ಕಾರಣಕ್ಕೆ ಮಂಡ್ಯ ಜಿಲ್ಲೆಯ ಬೆಳವಣಿಗೆಗೆ ಮೈಸೂರು ಅರಸರ ಕೊಡುಗೆಯೂ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ ಆಗಿದೆ. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಒಳ್ಳೆಯ ರೀತಿಯಲ್ಲಿ ಹೋರಾಟ ಮಾಡುವುದು ಅಗತ್ಯ. ಇನ್ನೂ ಒಳ್ಳೆಯ ಕೆಲಸ ಮಾಡುವ ನಿಟ್ಟಿನಲ್ಲಿ ನಮ್ಮ ಸಹಕಾರವೂ ಇದ್ದೇ ಇರುತ್ತದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದವೂ ಇರಲಿ ಎಂದು ಹೇಳಿದರು.

ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ, ಜಿಮ್ ಮಾಲೀಕರಾದ ಪ್ರಭಾವತಿ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜು, ಮುಖಂಡರಾದ ಪ್ರಸನ್ನ, ಲಂಕೇಶ್, ಸಿ.ಟಿ. ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

7 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

8 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago