ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ – 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಪ್ತಿಯಾಗಿರುವ ನಗದು ಹಣವನ್ನು ಬಿಡುಗಡೆ ಮಾಡಲು ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಹಣ ಬಿಡುಗಡೆ ಸಮಿತಿಯನ್ನು ರಚಿಸಿರುತ್ತಾರೆ. ಹಣ ಬಿಡುಗಡೆ ಸಮಿತಿ ಸಭೆಯನ್ನು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಲೋಕಸಭಾ ಚುನಾವಣೆ – 2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕ್ಷಿಪ್ರ ಸಂಚಾರಿದಳ (FST) ಮತ್ತು ಸ್ಥಾಯಿ ಕಣ್ಗಾವಲು ತಂಡ(SST), ಪೊಲೀಸ್ ತಂಡದವರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ/ತಾಲ್ಲೂಕು ಉಪಖಜಾನೆಯ ವಶದಲ್ಲಿರಿಸಲಾಗಿರುತ್ತದೆ.
ಈ ಹಣವು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಖಾತ್ರಿಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಹಣವನ್ನು ಬಿಡುಗಡೆಗೊಳಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ಸಂಚಾಲಕರು ಮತ್ತು ನೋಡಲ್ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…