ಮಂಡ್ಯ

ಮೇಲುಕೋಟೆಯಲ್ಲಿ ಕೋತಿಗಳ ಕಾಟಕ್ಕೆ ಹೈರಾಣಾದ ಪ್ರವಾಸಿಗರು

ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ.

ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್‌ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್‌ ದಾಳಿ ನಡೆಸಿ ಕೈಯಿಂದ ಪದಾರ್ಥಗಳನ್ನು ಕಿತ್ತುಕೊಳ್ಳುತ್ತವೆ. ಇದಲ್ಲದೇ ಬ್ಯಾಗ್‌ಗಳನ್ನು ಸಹ ಕಿತ್ತುಕೊಂಡು ಓಡಿ ಹೋಗಲು ಹೊಂಚು ಹಾಕುತ್ತವೆ.

ಇನ್ನು ಯೋಗಾನರಸಿಂಹಸ್ವಾಮಿ ಬೆಟ್ಟದ ಮೇಲೆ ಕೋತಿಗಳೇ ರಾಜ್ಯಭಾರ ನಡೆಸುತ್ತಿದ್ದು, ಹಿಂಡು ಹಿಂಡು ಕೋತಿಗಳನ್ನು ನೋಡಿ ಪ್ರವಾಸಿಗರು ಹೈರಾಣಾಗಿದ್ದಾರೆ. ವಾಹನಗಳನ್ನು ಬಿಡದ ಕೋತಿಗಳು ಅಲ್ಲಿ ದಾಳಿ ನಡೆಸಿರುವ ಹಲವು ಪ್ರಕರಣಗಳು ದಾಖಲಾಗಿವೆ.

ಪ್ರವಾಸಿಗರ ಜೊತೆ ಸ್ಥಳೀಯರು ಸಹ ಕೋತಿಗಳ ಹಾವಳಿಯಿಂದ ಬೇಸತ್ತು ಹೋಗಿದ್ದು, ಮನೆಯಲ್ಲಿರುವ ಸಾಮಗ್ರಿಗಳನ್ನು ಕೋತಿಗಳು ನಾಶಪಡಿಸುತ್ತಿವೆ. ಇದರ ಜೊತೆಗೆ ಕೃಷಿ ಜಮೀನುಗಳಲ್ಲಿಯೂ ಕೋತಿಗಳು ಹಣ್ಣು-ತರಕಾರಿಗಳನ್ನು ನಾಶಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋತಿಗಳ ಹಾವಳಿ ಕಡಿಮೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

19 mins ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

1 hour ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

2 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

3 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

3 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

4 hours ago