ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ.
ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್ ದಾಳಿ ನಡೆಸಿ ಕೈಯಿಂದ ಪದಾರ್ಥಗಳನ್ನು ಕಿತ್ತುಕೊಳ್ಳುತ್ತವೆ. ಇದಲ್ಲದೇ ಬ್ಯಾಗ್ಗಳನ್ನು ಸಹ ಕಿತ್ತುಕೊಂಡು ಓಡಿ ಹೋಗಲು ಹೊಂಚು ಹಾಕುತ್ತವೆ.
ಇನ್ನು ಯೋಗಾನರಸಿಂಹಸ್ವಾಮಿ ಬೆಟ್ಟದ ಮೇಲೆ ಕೋತಿಗಳೇ ರಾಜ್ಯಭಾರ ನಡೆಸುತ್ತಿದ್ದು, ಹಿಂಡು ಹಿಂಡು ಕೋತಿಗಳನ್ನು ನೋಡಿ ಪ್ರವಾಸಿಗರು ಹೈರಾಣಾಗಿದ್ದಾರೆ. ವಾಹನಗಳನ್ನು ಬಿಡದ ಕೋತಿಗಳು ಅಲ್ಲಿ ದಾಳಿ ನಡೆಸಿರುವ ಹಲವು ಪ್ರಕರಣಗಳು ದಾಖಲಾಗಿವೆ.
ಪ್ರವಾಸಿಗರ ಜೊತೆ ಸ್ಥಳೀಯರು ಸಹ ಕೋತಿಗಳ ಹಾವಳಿಯಿಂದ ಬೇಸತ್ತು ಹೋಗಿದ್ದು, ಮನೆಯಲ್ಲಿರುವ ಸಾಮಗ್ರಿಗಳನ್ನು ಕೋತಿಗಳು ನಾಶಪಡಿಸುತ್ತಿವೆ. ಇದರ ಜೊತೆಗೆ ಕೃಷಿ ಜಮೀನುಗಳಲ್ಲಿಯೂ ಕೋತಿಗಳು ಹಣ್ಣು-ತರಕಾರಿಗಳನ್ನು ನಾಶಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋತಿಗಳ ಹಾವಳಿ ಕಡಿಮೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…