ಮಂಡ್ಯ

ಮೇಲುಕೋಟೆಯಲ್ಲಿ ಕೋತಿಗಳ ಕಾಟಕ್ಕೆ ಹೈರಾಣಾದ ಪ್ರವಾಸಿಗರು

ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ.

ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್‌ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್‌ ದಾಳಿ ನಡೆಸಿ ಕೈಯಿಂದ ಪದಾರ್ಥಗಳನ್ನು ಕಿತ್ತುಕೊಳ್ಳುತ್ತವೆ. ಇದಲ್ಲದೇ ಬ್ಯಾಗ್‌ಗಳನ್ನು ಸಹ ಕಿತ್ತುಕೊಂಡು ಓಡಿ ಹೋಗಲು ಹೊಂಚು ಹಾಕುತ್ತವೆ.

ಇನ್ನು ಯೋಗಾನರಸಿಂಹಸ್ವಾಮಿ ಬೆಟ್ಟದ ಮೇಲೆ ಕೋತಿಗಳೇ ರಾಜ್ಯಭಾರ ನಡೆಸುತ್ತಿದ್ದು, ಹಿಂಡು ಹಿಂಡು ಕೋತಿಗಳನ್ನು ನೋಡಿ ಪ್ರವಾಸಿಗರು ಹೈರಾಣಾಗಿದ್ದಾರೆ. ವಾಹನಗಳನ್ನು ಬಿಡದ ಕೋತಿಗಳು ಅಲ್ಲಿ ದಾಳಿ ನಡೆಸಿರುವ ಹಲವು ಪ್ರಕರಣಗಳು ದಾಖಲಾಗಿವೆ.

ಪ್ರವಾಸಿಗರ ಜೊತೆ ಸ್ಥಳೀಯರು ಸಹ ಕೋತಿಗಳ ಹಾವಳಿಯಿಂದ ಬೇಸತ್ತು ಹೋಗಿದ್ದು, ಮನೆಯಲ್ಲಿರುವ ಸಾಮಗ್ರಿಗಳನ್ನು ಕೋತಿಗಳು ನಾಶಪಡಿಸುತ್ತಿವೆ. ಇದರ ಜೊತೆಗೆ ಕೃಷಿ ಜಮೀನುಗಳಲ್ಲಿಯೂ ಕೋತಿಗಳು ಹಣ್ಣು-ತರಕಾರಿಗಳನ್ನು ನಾಶಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋತಿಗಳ ಹಾವಳಿ ಕಡಿಮೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

3 hours ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

3 hours ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

3 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

3 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

14 hours ago