ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ.
ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್ ದಾಳಿ ನಡೆಸಿ ಕೈಯಿಂದ ಪದಾರ್ಥಗಳನ್ನು ಕಿತ್ತುಕೊಳ್ಳುತ್ತವೆ. ಇದಲ್ಲದೇ ಬ್ಯಾಗ್ಗಳನ್ನು ಸಹ ಕಿತ್ತುಕೊಂಡು ಓಡಿ ಹೋಗಲು ಹೊಂಚು ಹಾಕುತ್ತವೆ.
ಇನ್ನು ಯೋಗಾನರಸಿಂಹಸ್ವಾಮಿ ಬೆಟ್ಟದ ಮೇಲೆ ಕೋತಿಗಳೇ ರಾಜ್ಯಭಾರ ನಡೆಸುತ್ತಿದ್ದು, ಹಿಂಡು ಹಿಂಡು ಕೋತಿಗಳನ್ನು ನೋಡಿ ಪ್ರವಾಸಿಗರು ಹೈರಾಣಾಗಿದ್ದಾರೆ. ವಾಹನಗಳನ್ನು ಬಿಡದ ಕೋತಿಗಳು ಅಲ್ಲಿ ದಾಳಿ ನಡೆಸಿರುವ ಹಲವು ಪ್ರಕರಣಗಳು ದಾಖಲಾಗಿವೆ.
ಪ್ರವಾಸಿಗರ ಜೊತೆ ಸ್ಥಳೀಯರು ಸಹ ಕೋತಿಗಳ ಹಾವಳಿಯಿಂದ ಬೇಸತ್ತು ಹೋಗಿದ್ದು, ಮನೆಯಲ್ಲಿರುವ ಸಾಮಗ್ರಿಗಳನ್ನು ಕೋತಿಗಳು ನಾಶಪಡಿಸುತ್ತಿವೆ. ಇದರ ಜೊತೆಗೆ ಕೃಷಿ ಜಮೀನುಗಳಲ್ಲಿಯೂ ಕೋತಿಗಳು ಹಣ್ಣು-ತರಕಾರಿಗಳನ್ನು ನಾಶಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋತಿಗಳ ಹಾವಳಿ ಕಡಿಮೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…