ಮಂಡ್ಯ

ಕೋಟಿಗಟ್ಟಲೆ ಹಣ ದೋಚಿ ತಾಯಿ-ಮಗಳು ಪರಾರಿ

ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ ಘಟನೆ ನಗರದ ಹೊಸಹಳ್ಳಿಯಲ್ಲಿ ನಡೆದಿದೆ.

ಹೊಸಹಳ್ಳಿಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ ಪುತ್ರಿ ದಿವ್ಯಾ ಎಂಬವರೇ ಅಕ್ಕಪಕ್ಕದವರನ್ನು ನಂಬಿಸಿ ಕೋಟಿಗಟ್ಟಲೆ ಹಣ ಪಡೆದು ಪರಾರಿಯಾಗಿರುವವರು. ನಗರದ ಹೊಸಹಳ್ಳಿ ಬಡಾವಣೆಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ತಾಯಿ ಗಿರಿಜಮ್ಮ ಹಾಗೂ ಮಗಳು ದಿವ್ಯಾ ಅಕ್ಕಪಕ್ಕದ ಮನೆಯವರ ವಿಶ್ವಾಸ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ರಾತ್ರೋ ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇವರ ಚಾಲಾಕಿತನಕ್ಕೆ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸದ್ಯ ತಾಯಿ, ಮಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ತಾಯಿ-ಮಗಳ ಈ ಕಿಲಾಡಿ ಜೋಡಿ ಸಾಲದ ಮೊತ್ತ ಮರು ಪಾವತಿಸದ ಹಿನ್ನೆಲೆ ವಿವಿಧ ಸಂಘಗಳು, ಮೈಕ್ರೋ ಫೈನಾನ್ಸ್ಗಳು, ಸಂಘದ ಸಹ ಸದಸ್ಯರು, ಸಾಲಕ್ಕೆ ಮಧ್ಯಸ್ಥಿಕೆ ವಹಿಸಿದ್ದವರ ದುಂಬಾಲು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಹಲವು ಮಹಿಳೆಯರು ಭಯಭೀತರಾಗಿದ್ದಾರೆ.

ಇವರ ನಂಬಿ ಸ್ತ್ರೀಶಕ್ತಿ, ಸ್ವಸಹಾಯ ಸಂಘ ಹಾಗೂ ಮೈಕ್ರೋ ಫೈನಾನ್ಸ್ಗಳಲ್ಲಿ ಜಾಮೀನು ಹಾಕಿರುವ ಬಡಕುಟುಂಬದ ಮಹಿಳೆಯರು, ಕೋಟಿಗಟ್ಟಲೆ ಹಣ ದೋಚಿ ಪರಾರಿಯಾದ ತಾಯಿ-ಮಗಳನ್ನು ಹುಡುಕಲು ಫ್ಲೆಕ್ಸ್ ಚಳವಳಿ ನಡೆಸುತ್ತಿದ್ದಾರೆ. ನಗರದ ಪ್ರಮುಖ ವೃತ್ತಗಳಲ್ಲಿ ಫ್ಲೆಕ್ಸ್ ಹಾಕಿ ಆರೋಪಿಗಳ ಪತ್ತೆಗಾಗಿ ಹಾಗೂ ಮಾಹಿತಿಗಾಗಿ ಮನವಿ ಮಾಡಿದ್ದಾರೆ.

ವಂಚಕ ತಾಯಿ, ಮಗಳ ನಡೆಯಿಂದ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಕೂಲಿನಾಲಿ ಮಾಡಿ, ಸಣ್ಣಪುಟ್ಟ ವ್ಯಾಪಾರ, ವ್ಯವಹಾರ ನಡೆಸುತ್ತಿದ್ದ ಕುಟುಂಬಗಳು, ಮಹಿಳೆಯರನ್ನೇ ಈ ಕಿಲಾಡಿ ಜೋಡಿ ಟಾರ್ಗೆಟ್ ಮಾಡಿ ವಂಚಿಸಿದೆ ಎನ್ನಲಾಗಿದೆ. ಈ ಘಟನೆ ಸಂಬAಧ ಮೋಸ ಹೋದವರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿ, ಆದಷ್ಟು ಬೇಗ ತಾಯಿ-ಮಗಳನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

7 mins ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

34 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

44 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

50 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

52 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

55 mins ago