ಮಂಡ್ಯ

ಕೋಟಿಗಟ್ಟಲೆ ಹಣ ದೋಚಿ ತಾಯಿ-ಮಗಳು ಪರಾರಿ

ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ ಘಟನೆ ನಗರದ ಹೊಸಹಳ್ಳಿಯಲ್ಲಿ ನಡೆದಿದೆ.

ಹೊಸಹಳ್ಳಿಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ ಪುತ್ರಿ ದಿವ್ಯಾ ಎಂಬವರೇ ಅಕ್ಕಪಕ್ಕದವರನ್ನು ನಂಬಿಸಿ ಕೋಟಿಗಟ್ಟಲೆ ಹಣ ಪಡೆದು ಪರಾರಿಯಾಗಿರುವವರು. ನಗರದ ಹೊಸಹಳ್ಳಿ ಬಡಾವಣೆಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ತಾಯಿ ಗಿರಿಜಮ್ಮ ಹಾಗೂ ಮಗಳು ದಿವ್ಯಾ ಅಕ್ಕಪಕ್ಕದ ಮನೆಯವರ ವಿಶ್ವಾಸ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ರಾತ್ರೋ ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇವರ ಚಾಲಾಕಿತನಕ್ಕೆ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸದ್ಯ ತಾಯಿ, ಮಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ತಾಯಿ-ಮಗಳ ಈ ಕಿಲಾಡಿ ಜೋಡಿ ಸಾಲದ ಮೊತ್ತ ಮರು ಪಾವತಿಸದ ಹಿನ್ನೆಲೆ ವಿವಿಧ ಸಂಘಗಳು, ಮೈಕ್ರೋ ಫೈನಾನ್ಸ್ಗಳು, ಸಂಘದ ಸಹ ಸದಸ್ಯರು, ಸಾಲಕ್ಕೆ ಮಧ್ಯಸ್ಥಿಕೆ ವಹಿಸಿದ್ದವರ ದುಂಬಾಲು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಹಲವು ಮಹಿಳೆಯರು ಭಯಭೀತರಾಗಿದ್ದಾರೆ.

ಇವರ ನಂಬಿ ಸ್ತ್ರೀಶಕ್ತಿ, ಸ್ವಸಹಾಯ ಸಂಘ ಹಾಗೂ ಮೈಕ್ರೋ ಫೈನಾನ್ಸ್ಗಳಲ್ಲಿ ಜಾಮೀನು ಹಾಕಿರುವ ಬಡಕುಟುಂಬದ ಮಹಿಳೆಯರು, ಕೋಟಿಗಟ್ಟಲೆ ಹಣ ದೋಚಿ ಪರಾರಿಯಾದ ತಾಯಿ-ಮಗಳನ್ನು ಹುಡುಕಲು ಫ್ಲೆಕ್ಸ್ ಚಳವಳಿ ನಡೆಸುತ್ತಿದ್ದಾರೆ. ನಗರದ ಪ್ರಮುಖ ವೃತ್ತಗಳಲ್ಲಿ ಫ್ಲೆಕ್ಸ್ ಹಾಕಿ ಆರೋಪಿಗಳ ಪತ್ತೆಗಾಗಿ ಹಾಗೂ ಮಾಹಿತಿಗಾಗಿ ಮನವಿ ಮಾಡಿದ್ದಾರೆ.

ವಂಚಕ ತಾಯಿ, ಮಗಳ ನಡೆಯಿಂದ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಕೂಲಿನಾಲಿ ಮಾಡಿ, ಸಣ್ಣಪುಟ್ಟ ವ್ಯಾಪಾರ, ವ್ಯವಹಾರ ನಡೆಸುತ್ತಿದ್ದ ಕುಟುಂಬಗಳು, ಮಹಿಳೆಯರನ್ನೇ ಈ ಕಿಲಾಡಿ ಜೋಡಿ ಟಾರ್ಗೆಟ್ ಮಾಡಿ ವಂಚಿಸಿದೆ ಎನ್ನಲಾಗಿದೆ. ಈ ಘಟನೆ ಸಂಬAಧ ಮೋಸ ಹೋದವರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿ, ಆದಷ್ಟು ಬೇಗ ತಾಯಿ-ಮಗಳನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

11 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

12 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

12 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

13 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

13 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

14 hours ago