ಮಂಡ್ಯ

ಕೋಟಿಗಟ್ಟಲೆ ಹಣ ದೋಚಿ ತಾಯಿ-ಮಗಳು ಪರಾರಿ

ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ ಘಟನೆ ನಗರದ ಹೊಸಹಳ್ಳಿಯಲ್ಲಿ ನಡೆದಿದೆ.

ಹೊಸಹಳ್ಳಿಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ ಪುತ್ರಿ ದಿವ್ಯಾ ಎಂಬವರೇ ಅಕ್ಕಪಕ್ಕದವರನ್ನು ನಂಬಿಸಿ ಕೋಟಿಗಟ್ಟಲೆ ಹಣ ಪಡೆದು ಪರಾರಿಯಾಗಿರುವವರು. ನಗರದ ಹೊಸಹಳ್ಳಿ ಬಡಾವಣೆಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ತಾಯಿ ಗಿರಿಜಮ್ಮ ಹಾಗೂ ಮಗಳು ದಿವ್ಯಾ ಅಕ್ಕಪಕ್ಕದ ಮನೆಯವರ ವಿಶ್ವಾಸ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ರಾತ್ರೋ ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇವರ ಚಾಲಾಕಿತನಕ್ಕೆ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸದ್ಯ ತಾಯಿ, ಮಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ತಾಯಿ-ಮಗಳ ಈ ಕಿಲಾಡಿ ಜೋಡಿ ಸಾಲದ ಮೊತ್ತ ಮರು ಪಾವತಿಸದ ಹಿನ್ನೆಲೆ ವಿವಿಧ ಸಂಘಗಳು, ಮೈಕ್ರೋ ಫೈನಾನ್ಸ್ಗಳು, ಸಂಘದ ಸಹ ಸದಸ್ಯರು, ಸಾಲಕ್ಕೆ ಮಧ್ಯಸ್ಥಿಕೆ ವಹಿಸಿದ್ದವರ ದುಂಬಾಲು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಹಲವು ಮಹಿಳೆಯರು ಭಯಭೀತರಾಗಿದ್ದಾರೆ.

ಇವರ ನಂಬಿ ಸ್ತ್ರೀಶಕ್ತಿ, ಸ್ವಸಹಾಯ ಸಂಘ ಹಾಗೂ ಮೈಕ್ರೋ ಫೈನಾನ್ಸ್ಗಳಲ್ಲಿ ಜಾಮೀನು ಹಾಕಿರುವ ಬಡಕುಟುಂಬದ ಮಹಿಳೆಯರು, ಕೋಟಿಗಟ್ಟಲೆ ಹಣ ದೋಚಿ ಪರಾರಿಯಾದ ತಾಯಿ-ಮಗಳನ್ನು ಹುಡುಕಲು ಫ್ಲೆಕ್ಸ್ ಚಳವಳಿ ನಡೆಸುತ್ತಿದ್ದಾರೆ. ನಗರದ ಪ್ರಮುಖ ವೃತ್ತಗಳಲ್ಲಿ ಫ್ಲೆಕ್ಸ್ ಹಾಕಿ ಆರೋಪಿಗಳ ಪತ್ತೆಗಾಗಿ ಹಾಗೂ ಮಾಹಿತಿಗಾಗಿ ಮನವಿ ಮಾಡಿದ್ದಾರೆ.

ವಂಚಕ ತಾಯಿ, ಮಗಳ ನಡೆಯಿಂದ ೫೦ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಕೂಲಿನಾಲಿ ಮಾಡಿ, ಸಣ್ಣಪುಟ್ಟ ವ್ಯಾಪಾರ, ವ್ಯವಹಾರ ನಡೆಸುತ್ತಿದ್ದ ಕುಟುಂಬಗಳು, ಮಹಿಳೆಯರನ್ನೇ ಈ ಕಿಲಾಡಿ ಜೋಡಿ ಟಾರ್ಗೆಟ್ ಮಾಡಿ ವಂಚಿಸಿದೆ ಎನ್ನಲಾಗಿದೆ. ಈ ಘಟನೆ ಸಂಬAಧ ಮೋಸ ಹೋದವರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿ, ಆದಷ್ಟು ಬೇಗ ತಾಯಿ-ಮಗಳನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

6 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

6 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

6 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

6 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago