ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ಧಾರುಣ ಘಟನೆಯೊಂದು ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಗಳು ವಿಜಯಲಕ್ಷ್ಮೀ ಹಾಗೂ ತಾಯಿ ಲಕ್ಷ್ಮೀ ಎಂದು ಗುರುತಿಸಲಾಗಿದೆ.
ಕಳೆದ ಕೆಲ ವರ್ಷಗಳಿಂದ ಮಾರಸಿಂಗನಹಳ್ಳಿ ಹರಿಕೃಷ್ಣ ಹಾಗೂ ವಿಜಯಲಕ್ಷ್ಮೀ ಪರಸ್ಪರ ಪ್ರೀತಿಸುತ್ತಿದ್ದರು. ಯಾಕೋ ಏನೋ ಇದ್ದಕ್ಕಿದ್ದಂತೆ ಹರಿಕೃಷ್ಣ ಬೇರೆ ಹುಡುಗಿ ಜೊತೆ ಸುತ್ತಾಟ ನಡೆಸಲು ಶುರುಮಾಡಿದ್ದ. ಇದನ್ನು ಪ್ರಶ್ನಿಸಿದ ವಿಜಯಲಕ್ಷ್ಮೀಗೆ ನಿನ್ನನ್ನು ಯಾವುದೇ ಕಾರಣಕ್ಕೂ ಮದುವೆಯಾಗಲ್ಲ ಎಂದು ಹೇಳಿದ್ದ.
ಈ ಹಿನ್ನೆಲೆಯಲ್ಲಿ ಮನನೊಂದ ವಿಜಯಲಕ್ಷ್ಮೀ ಕಳೆದ 20 ದಿನಗಳ ಹಿಂದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು.
ಮಗಳ ಸಾವಿಗೆ ನ್ಯಾಯ ಸಿಗಲೆಂದು ಒತ್ತಾಯಿಸಿ ತಂದೆ ನಂಜುಂಡೇಗೌಡ ಠಾಣೆಗೆ ದೂರು ಕೊಡಲು ಹೋಗಿದ್ದರು. ಈ ವೇಳೆ ನ್ಯಾಯ ಕೇಳಲು ಹೋದವರ ಮೇಲೆಯೇ ಪೊಲೀಸರು ಎಫ್ಐಆರ್ ದಾಖಲಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದರಿಂದ ತೀವ್ರವಾಗಿ ಮನನೊಂದಿದ್ದ ತಾಯಿ ಲಕ್ಷ್ಮೀ ಮಗಳ ಸಾವಿಗೆ ನ್ಯಾಯವೂ ಇಲ್ಲ. ನಮಗೆ ನೆಮ್ಮದಿಯೂ ಇಲ್ಲ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…