ಮಂಡ್ಯ: ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು.
ಸೋಮವಾರ ಕೆ.ಆರ್.ಎಸ್ ಅಣೆಕಟ್ಟಿಗೆ ಬಾಗಿನ ಸಮರ್ಪಿಸಿ, ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ ಎಂದು ಹೇಳಿದರು.
ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ
ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ತಮಿಳುನಾಡಿನವರು ಈ ನದಿಯ ಮೂಲಕ ಅನ್ನ ಬೆಳೆಯುತ್ತಿದ್ದೇವೆ. ಎಲ್ಲರ ಪಾಲಿನ ಜೀವನದಿ ಕಾವೇರಿಗೆ 92 ವರ್ಷ ಕಳೆದರೂ ನಮನ ಸಲ್ಲಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿಯಲ್ಲಿ ಈ ವರ್ಷ ಉತ್ತಮ ಮಳೆಯಾಗಲಿ ಎಂದು ಬೇಡಿಕೊಂಡಿದ್ದೆವು. ನಮ್ಮ ಬದುಕು ಉಳಿಸು ಎಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೆವು, ಮನುಷ್ಯ ಪ್ರಯತ್ನಕ್ಕೆ ಸೋಲಾಗಬಹುದು ಆದರೆ ಪ್ರಾರ್ಥನೆಗೆ ಎಂದೂ ಸೋಲಾಗುವುದಿಲ್ಲ ಎನ್ನುವುದಕ್ಕೆ ಕಾವೇರಿ ತಾಯಿ ತುಂಬಿ ಹರಿಯುತ್ತಿರುವುದೇ ಸಾಕ್ಷಿ. ಸ್ವರ್ಣಗೌರಿ ಹಬ್ಬದ ದಿನ ಮನೆಯ ಹೆಣ್ಣುಮಕ್ಕಳಿಗೆ ಬಾಗಿನ ಅರ್ಪಿಸಿದಂತೆ ಶುಭಗಳಿಗೆಯ ಅಭಿಜಿನ್ ಲಗ್ನದಲ್ಲಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಾಗಿದೆ ಎಂದರು.
ತಮಿಳುನಾಡಿಗೆ ನಾನು ಅಥವಾ ಸಿದ್ದರಾಮಯ್ಯ ಅವರು ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದಿದೆ ಆದ ಕಾರಣ ನೀರು ಅವರಿಗೆ ಹೋಗಿದೆ. ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅವರಿಗೆಲ್ಲ ಈಗ ತಕ್ಕ ಉತ್ತರ ಸಿಕ್ಕಿದೆ. ಮೇಲೆ ಇರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ ಎಂದು ಹೇಳಿದರು.
ಮಳೆ ಇದೇ ರೀತಿ ಉತ್ತಮವಾಗಿ ಬಂದರೆ ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಈ ವರ್ಷ ನೀಡಬಹುದು. ಕಳೆದ ವರ್ಷ 223 ತಾಲ್ಲೂಕುಗಳಲ್ಲಿ ಬರ ಬಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಟೀಕೆ ಮಾಡಿದರು. ಆದರೂ ನಾವು ಜನಪರವಾಗಿ ಕೆಲಸ ಮಾಡಿದೆವು. ಏಕೆಂದರೆ ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಯಾರನ್ನೂ ನಾನು ಟೀಕೆ ಮಾಡುವುದಿಲ್ಲ. ನಮ್ಮ ಕೆಲಸ ಗಳು ಅವರಿಗೆ ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತವೆ ಎಂದು ಹೇಳಿದರು.
ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ…
ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ…
ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ…
ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ…
ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್ನ ಬಿ.ವಿಲೇಜ್ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್…
ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…