Mysore
25
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ತಾಯಿ,ಮಗ ಆತ್ಮಹತ್ಯೆ: ಗ್ರಾಮಕ್ಕೆ ಆರ್‌.ಅಶೋಕ್‌ ಭೇಟಿ

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

ಮನೆ ಸೀಜ್‌ ವೇಳೆ ಬ್ಯಾಂಕ್‌ ಸಿಬ್ಬಂದಿಗಳು ವರ್ತಿಸಿದ ಬಗ್ಗೆ ಮೃತ ಪ್ರೇಮ ಅವರ ಪುತ್ರಿಯರು ಆರ್‌.ಅಶೋಕ್‌ ಬಳಿ ವಿವರಿಸಿ ಅಳಲು ತೋಡಿಕೊಂಡರು.

Tags:
error: Content is protected !!