ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
ಮನೆ ಸೀಜ್ ವೇಳೆ ಬ್ಯಾಂಕ್ ಸಿಬ್ಬಂದಿಗಳು ವರ್ತಿಸಿದ ಬಗ್ಗೆ ಮೃತ ಪ್ರೇಮ ಅವರ ಪುತ್ರಿಯರು ಆರ್.ಅಶೋಕ್ ಬಳಿ ವಿವರಿಸಿ ಅಳಲು ತೋಡಿಕೊಂಡರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…