ಮಂಡ್ಯ

ನನ್ನ ಹೆಜ್ಜೆ ಮಂಡ್ಯಕ್ಕಾಗಿ; ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದೇನು?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ದಂಡೇ ಒಂದೆಡೆ ಇದ್ದರೇ, ಒಳಬೇಗುದಿ, ಸ್ವತಂತ್ರ ಅಭ್ಯರ್ಥಿಗಳ ಆರ್ಭಟ ಜೋರು ಎನ್ನಬಹುದಾಗಿದೆ.

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ಕಣಕ್ಕಿಳಿದಿದ್ದಾರೆ. ಇತ್ತ ಬಿಜೆಪಿಯಿಂದ ಸುಮಲತಾ ಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದೆ ಎನ್‌ಡಿಎ ತನ್ನ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ನೇಮಕ ಮಾಡಿದ್ದಾರೆ.

ಇನ್ನು ಮಂಡ್ಯ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಸುಮಲತಾ ಅವರಿಗೆ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಮುಂದಿನ ನಡೆ ಬಗ್ಗೆ ಚರ್ಚೆ ಮಾಡಲು ನಾಳೆ (ಏ.3) ಆಪ್ತರ ಸಭೆ ಕರೆದಿರುವ ಸುಮಲತಾ ಅವರು ತಮ್ಮ ಮುಂದಿನ ನಡೆ ಏನೆಂಬುದನ್ನು ತಿಳಿಸಲಿದ್ದಾರೆ.

ಇದರ ಬೆನ್ನಲ್ಲೇ ಇಂದು(ಏ.2) ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದ್ದಾರೆ. ತಾವು ಕೊನೆಯವರೆಗೂ ಮಂಡ್ಯಕ್ಕಾಗಿಯೇ ಹೋರಾಟ ಮಾಡಲಿದ್ದು, ಎಂದಿಗೂ ಮಂಡ್ಯದ ಜನತೆಯ ಸೇವೆಗೆ ಸಿದ್ದರಿರುವ ಬಗ್ಗೆ ಸಂದೇಶವನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಪತಿ ಅಂಬರೀಶ್‌, ಪುತ್ರ ಅಭಿಷೇಕ್‌ ಮತ್ತು ನಟ ದರ್ಶನ್‌ ಜೊತೆಗಿನ ತಮ್ಮ ಫೋಟೋವನ್ನು ಪೋಸ್ಟ್‌ ಮಾಡಿದ್ದಾರೆ.

ಎಕ್ಸ್‌ ಖಾತೆಯಲ್ಲೇನಿದೆ?

ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

15 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago