ಮಂಡ್ಯ

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಇಂದು (ಅಕ್ಟೋಬರ್‌ 18) ಮುಡಾ ಕಚೇರಿಯ ದಾಳಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರು ನ್ಯಾಯಯುತ ಹಾಗೂ ಕಾನೂನು ಬದ್ಧವಾಗಿ ನಿವೇಶನಗಳನ್ನು ಪಡೆದಿದ್ದರೆ ಮುಡಾ 50:50 ಅನುಪಾತದ ನಿವೇಶನಗಳನ್ನು ವಾಪಾಸ್‌ ನೀಡುವ ಸನ್ನಿವೇಶವೇ ಬರುತ್ತಿರಲಿಲ್ಲ. ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಹಾಗಾಗಿ ನಿವೇಶನಗಳನ್ನು ಕೊಟ್ಟಿದ್ದಾರೆ. ಆ ನಿವೇಶನಗಳನ್ನು ತಿರುಗಿಸುವಾಗಲೇ ರುಜುವಾಗಿದೆ ಅವರಲ್ಲಿ ದೋಷವಿದೆ. ತಪ್ಪೇ ಮಾಡಿಲ್ಲವೆಂದರೆ ಯಾಕೆ ಎದುರಾಗಬೇಕು? ಎಂದು ಪ್ರಶ್ನಿಸಿದರು.

ನ್ಯಾಯಾಲಯಗಳಿಂದ ನ್ಯಾಯಯುತವಾಗಿ ತನಿಖೆಯಾಗಬೇಕೆಂದು ಆದೇಶಿಸಿದ್ದಾರೆ. ಆದರೆ, ಲೋಕಾಯುಕ್ತದಿಂದ ತನಿಖೆ ನಡೆದರೆ, ಸರ್ಕಾರದ ವಿರುದ್ಧವೇ ಅವರು ತನಿಖೆ ನಡೆಸಿ, ಸತ್ಯಾಂಶವನ್ನು ಹೇಳುತ್ತಾರೆ ಎಂಬುದು ಸಾಧ್ಯವೇ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಯಾಗಬೇಕೆಂದರೆ ಇ.ಡಿ.ತನಿಖೆ ಅಗತ್ಯ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

10 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

11 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

16 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago