ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಇಂದು (ಅಕ್ಟೋಬರ್ 18) ಮುಡಾ ಕಚೇರಿಯ ದಾಳಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರು ನ್ಯಾಯಯುತ ಹಾಗೂ ಕಾನೂನು ಬದ್ಧವಾಗಿ ನಿವೇಶನಗಳನ್ನು ಪಡೆದಿದ್ದರೆ ಮುಡಾ 50:50 ಅನುಪಾತದ ನಿವೇಶನಗಳನ್ನು ವಾಪಾಸ್ ನೀಡುವ ಸನ್ನಿವೇಶವೇ ಬರುತ್ತಿರಲಿಲ್ಲ. ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಹಾಗಾಗಿ ನಿವೇಶನಗಳನ್ನು ಕೊಟ್ಟಿದ್ದಾರೆ. ಆ ನಿವೇಶನಗಳನ್ನು ತಿರುಗಿಸುವಾಗಲೇ ರುಜುವಾಗಿದೆ ಅವರಲ್ಲಿ ದೋಷವಿದೆ. ತಪ್ಪೇ ಮಾಡಿಲ್ಲವೆಂದರೆ ಯಾಕೆ ಎದುರಾಗಬೇಕು? ಎಂದು ಪ್ರಶ್ನಿಸಿದರು.
ನ್ಯಾಯಾಲಯಗಳಿಂದ ನ್ಯಾಯಯುತವಾಗಿ ತನಿಖೆಯಾಗಬೇಕೆಂದು ಆದೇಶಿಸಿದ್ದಾರೆ. ಆದರೆ, ಲೋಕಾಯುಕ್ತದಿಂದ ತನಿಖೆ ನಡೆದರೆ, ಸರ್ಕಾರದ ವಿರುದ್ಧವೇ ಅವರು ತನಿಖೆ ನಡೆಸಿ, ಸತ್ಯಾಂಶವನ್ನು ಹೇಳುತ್ತಾರೆ ಎಂಬುದು ಸಾಧ್ಯವೇ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಯಾಗಬೇಕೆಂದರೆ ಇ.ಡಿ.ತನಿಖೆ ಅಗತ್ಯ ಎಂದು ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…