ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಇಂದು (ಅಕ್ಟೋಬರ್ 18) ಮುಡಾ ಕಚೇರಿಯ ದಾಳಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರು ನ್ಯಾಯಯುತ ಹಾಗೂ ಕಾನೂನು ಬದ್ಧವಾಗಿ ನಿವೇಶನಗಳನ್ನು ಪಡೆದಿದ್ದರೆ ಮುಡಾ 50:50 ಅನುಪಾತದ ನಿವೇಶನಗಳನ್ನು ವಾಪಾಸ್ ನೀಡುವ ಸನ್ನಿವೇಶವೇ ಬರುತ್ತಿರಲಿಲ್ಲ. ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಹಾಗಾಗಿ ನಿವೇಶನಗಳನ್ನು ಕೊಟ್ಟಿದ್ದಾರೆ. ಆ ನಿವೇಶನಗಳನ್ನು ತಿರುಗಿಸುವಾಗಲೇ ರುಜುವಾಗಿದೆ ಅವರಲ್ಲಿ ದೋಷವಿದೆ. ತಪ್ಪೇ ಮಾಡಿಲ್ಲವೆಂದರೆ ಯಾಕೆ ಎದುರಾಗಬೇಕು? ಎಂದು ಪ್ರಶ್ನಿಸಿದರು.
ನ್ಯಾಯಾಲಯಗಳಿಂದ ನ್ಯಾಯಯುತವಾಗಿ ತನಿಖೆಯಾಗಬೇಕೆಂದು ಆದೇಶಿಸಿದ್ದಾರೆ. ಆದರೆ, ಲೋಕಾಯುಕ್ತದಿಂದ ತನಿಖೆ ನಡೆದರೆ, ಸರ್ಕಾರದ ವಿರುದ್ಧವೇ ಅವರು ತನಿಖೆ ನಡೆಸಿ, ಸತ್ಯಾಂಶವನ್ನು ಹೇಳುತ್ತಾರೆ ಎಂಬುದು ಸಾಧ್ಯವೇ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಯಾಗಬೇಕೆಂದರೆ ಇ.ಡಿ.ತನಿಖೆ ಅಗತ್ಯ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…