ನಾಗಮಂಗಲ : ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), ಈಕೆಯ ಮೊಮ್ಮಗಳು ಎರಡೂವರೆ ವರ್ಷ ರಿಷಿಕಾ ಕೊಲೆಯಾದವರು. ಅಲೆಮಾರಿಯ ಜೀವನ ನಡೆಸುತ್ತಿದ್ದ ಇವರು ವಾರದ ಹಿಂದೆ ಈ ಚುಂಚನಹಳ್ಳಿ ಪಾಳ್ಯದಲ್ಲಿ ವಾಸವಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್ ಎಂಬುವರ ಜತೆಯಲ್ಲಿ ವಾಸವಿದ್ದರು.
ಈ ಮಧ್ಯೆ ಮೂಟೆಯಲ್ಲಿ ಶವವಾಗಿ ಇವರು ಪತ್ತೆಯಾಗಿದ್ದಾರೆ. ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಮೂಟೆಗಳಿಂದ ದುರ್ವಾಸನೆ ಬರುತ್ತಿದ್ದನ್ನು ಬುಧವಾರ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯ ನೆರವಿನೊಂದಿಗೆ ಶವಗಳನ್ನು ಕಟ್ಟೆಯಿಂದ ಹೊರ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಜಯಮ್ಮ, ರಿಷಿಕ ಅವರ ಶವಗಳು ಕಂಡುಬಂದಿವೆ.
ಇಬ್ಬರ ಶವಗಳನ್ನು ಆದಿಚುಂಚಗಿರಿ ವೈದ್ಯಕೀಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಇವರ ಜತಗಿದ್ದ ಶ್ರೀನಿವಾಸ್ ಅವರೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಬೆಳ್ಳೂರು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…