ಮಂಡ್ಯ

ನಾಗಮಂಗಲದಲ್ಲಿ ಅಜ್ಜಿ, ಮೊಮ್ಮಗಳ ಕೊಲೆ !

ನಾಗಮಂಗಲ :  ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), ಈಕೆಯ ಮೊಮ್ಮಗಳು ಎರಡೂವರೆ ವರ್ಷ ರಿಷಿಕಾ ಕೊಲೆಯಾದವರು. ಅಲೆಮಾರಿಯ ಜೀವನ ನಡೆಸುತ್ತಿದ್ದ ಇವರು ವಾರದ ಹಿಂದೆ ಈ ಚುಂಚನಹಳ್ಳಿ ಪಾಳ್ಯದಲ್ಲಿ ವಾಸವಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್ ಎಂಬುವರ ಜತೆಯಲ್ಲಿ ವಾಸವಿದ್ದರು.

ಈ ಮಧ್ಯೆ ಮೂಟೆಯಲ್ಲಿ ಶವವಾಗಿ ಇವರು ಪತ್ತೆಯಾಗಿದ್ದಾರೆ. ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಮೂಟೆಗಳಿಂದ ದುರ್ವಾಸನೆ ಬರುತ್ತಿದ್ದನ್ನು ಬುಧವಾರ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯ ನೆರವಿನೊಂದಿಗೆ ಶವಗಳನ್ನು ಕಟ್ಟೆಯಿಂದ ಹೊರ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಜಯಮ್ಮ, ರಿಷಿಕ ಅವರ ಶವಗಳು ಕಂಡುಬಂದಿವೆ.

ಇಬ್ಬರ ಶವಗಳನ್ನು ಆದಿಚುಂಚಗಿರಿ ವೈದ್ಯಕೀಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಇವರ ಜತಗಿದ್ದ ಶ್ರೀನಿವಾಸ್ ಅವರೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಬೆಳ್ಳೂರು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

6 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

7 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

8 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

8 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

8 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

9 hours ago