ಮಂಡ್ಯ

ನಾಗಮಂಗಲದಲ್ಲಿ ಅಜ್ಜಿ, ಮೊಮ್ಮಗಳ ಕೊಲೆ !

ನಾಗಮಂಗಲ :  ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), ಈಕೆಯ ಮೊಮ್ಮಗಳು ಎರಡೂವರೆ ವರ್ಷ ರಿಷಿಕಾ ಕೊಲೆಯಾದವರು. ಅಲೆಮಾರಿಯ ಜೀವನ ನಡೆಸುತ್ತಿದ್ದ ಇವರು ವಾರದ ಹಿಂದೆ ಈ ಚುಂಚನಹಳ್ಳಿ ಪಾಳ್ಯದಲ್ಲಿ ವಾಸವಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್ ಎಂಬುವರ ಜತೆಯಲ್ಲಿ ವಾಸವಿದ್ದರು.

ಈ ಮಧ್ಯೆ ಮೂಟೆಯಲ್ಲಿ ಶವವಾಗಿ ಇವರು ಪತ್ತೆಯಾಗಿದ್ದಾರೆ. ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಮೂಟೆಗಳಿಂದ ದುರ್ವಾಸನೆ ಬರುತ್ತಿದ್ದನ್ನು ಬುಧವಾರ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯ ನೆರವಿನೊಂದಿಗೆ ಶವಗಳನ್ನು ಕಟ್ಟೆಯಿಂದ ಹೊರ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಜಯಮ್ಮ, ರಿಷಿಕ ಅವರ ಶವಗಳು ಕಂಡುಬಂದಿವೆ.

ಇಬ್ಬರ ಶವಗಳನ್ನು ಆದಿಚುಂಚಗಿರಿ ವೈದ್ಯಕೀಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಇವರ ಜತಗಿದ್ದ ಶ್ರೀನಿವಾಸ್ ಅವರೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಬೆಳ್ಳೂರು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

1 min ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

7 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

18 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

55 mins ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago