ನಾಗಮಂಗಲ : ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), ಈಕೆಯ ಮೊಮ್ಮಗಳು ಎರಡೂವರೆ ವರ್ಷ ರಿಷಿಕಾ ಕೊಲೆಯಾದವರು. ಅಲೆಮಾರಿಯ ಜೀವನ ನಡೆಸುತ್ತಿದ್ದ ಇವರು ವಾರದ ಹಿಂದೆ ಈ ಚುಂಚನಹಳ್ಳಿ ಪಾಳ್ಯದಲ್ಲಿ ವಾಸವಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್ ಎಂಬುವರ ಜತೆಯಲ್ಲಿ ವಾಸವಿದ್ದರು.
ಈ ಮಧ್ಯೆ ಮೂಟೆಯಲ್ಲಿ ಶವವಾಗಿ ಇವರು ಪತ್ತೆಯಾಗಿದ್ದಾರೆ. ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಮೂಟೆಗಳಿಂದ ದುರ್ವಾಸನೆ ಬರುತ್ತಿದ್ದನ್ನು ಬುಧವಾರ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯ ನೆರವಿನೊಂದಿಗೆ ಶವಗಳನ್ನು ಕಟ್ಟೆಯಿಂದ ಹೊರ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಜಯಮ್ಮ, ರಿಷಿಕ ಅವರ ಶವಗಳು ಕಂಡುಬಂದಿವೆ.
ಇಬ್ಬರ ಶವಗಳನ್ನು ಆದಿಚುಂಚಗಿರಿ ವೈದ್ಯಕೀಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಇವರ ಜತಗಿದ್ದ ಶ್ರೀನಿವಾಸ್ ಅವರೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಬೆಳ್ಳೂರು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…