ಮಂಡ್ಯ

ನಾಗಮಂಗಲದಲ್ಲಿ ಅಜ್ಜಿ, ಮೊಮ್ಮಗಳ ಕೊಲೆ !

ನಾಗಮಂಗಲ :  ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), ಈಕೆಯ ಮೊಮ್ಮಗಳು ಎರಡೂವರೆ ವರ್ಷ ರಿಷಿಕಾ ಕೊಲೆಯಾದವರು. ಅಲೆಮಾರಿಯ ಜೀವನ ನಡೆಸುತ್ತಿದ್ದ ಇವರು ವಾರದ ಹಿಂದೆ ಈ ಚುಂಚನಹಳ್ಳಿ ಪಾಳ್ಯದಲ್ಲಿ ವಾಸವಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್ ಎಂಬುವರ ಜತೆಯಲ್ಲಿ ವಾಸವಿದ್ದರು.

ಈ ಮಧ್ಯೆ ಮೂಟೆಯಲ್ಲಿ ಶವವಾಗಿ ಇವರು ಪತ್ತೆಯಾಗಿದ್ದಾರೆ. ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಮೂಟೆಗಳಿಂದ ದುರ್ವಾಸನೆ ಬರುತ್ತಿದ್ದನ್ನು ಬುಧವಾರ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯ ನೆರವಿನೊಂದಿಗೆ ಶವಗಳನ್ನು ಕಟ್ಟೆಯಿಂದ ಹೊರ ತೆಗೆದು ಪರಿಶೀಲಿಸಿದಾಗ ಅದರಲ್ಲಿ ಜಯಮ್ಮ, ರಿಷಿಕ ಅವರ ಶವಗಳು ಕಂಡುಬಂದಿವೆ.

ಇಬ್ಬರ ಶವಗಳನ್ನು ಆದಿಚುಂಚಗಿರಿ ವೈದ್ಯಕೀಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಇವರ ಜತಗಿದ್ದ ಶ್ರೀನಿವಾಸ್ ಅವರೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಬೆಳ್ಳೂರು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago