ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಇವನು ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗನಾಗಿದ್ದಾನೆ. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾಏಕಿ ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.
ಹಂತಕರಿಂದ ಪ್ರಜ್ವಲ್ ತಪ್ಪಿಸಿಕೊಳ್ಳಲು ಪ್ರತಯ್ನಿಸಿದರೂ ಸಾದ್ಯವಾಗಿಲ್ಲ. ತೀವ್ರ ರಕ್ತಸ್ರಾವದಿಂದ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಪ್ರಜ್ವಲ್ ಮೇಲಿನ ಹಲ್ಲೆ ಹಳೇ ದ್ವೇಷಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಮಂಡ್ಯ ಎಸ್.ಪಿ ಯತೀಶ್, ಎ.ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಮುರುಳಿ, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಎ ಮಲ್ಲೇಶ್ ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…