ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಇವನು ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗನಾಗಿದ್ದಾನೆ. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾಏಕಿ ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.
ಹಂತಕರಿಂದ ಪ್ರಜ್ವಲ್ ತಪ್ಪಿಸಿಕೊಳ್ಳಲು ಪ್ರತಯ್ನಿಸಿದರೂ ಸಾದ್ಯವಾಗಿಲ್ಲ. ತೀವ್ರ ರಕ್ತಸ್ರಾವದಿಂದ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಪ್ರಜ್ವಲ್ ಮೇಲಿನ ಹಲ್ಲೆ ಹಳೇ ದ್ವೇಷಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಮಂಡ್ಯ ಎಸ್.ಪಿ ಯತೀಶ್, ಎ.ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಮುರುಳಿ, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಎ ಮಲ್ಲೇಶ್ ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…