ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಇವನು ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗನಾಗಿದ್ದಾನೆ. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾಏಕಿ ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.
ಹಂತಕರಿಂದ ಪ್ರಜ್ವಲ್ ತಪ್ಪಿಸಿಕೊಳ್ಳಲು ಪ್ರತಯ್ನಿಸಿದರೂ ಸಾದ್ಯವಾಗಿಲ್ಲ. ತೀವ್ರ ರಕ್ತಸ್ರಾವದಿಂದ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಪ್ರಜ್ವಲ್ ಮೇಲಿನ ಹಲ್ಲೆ ಹಳೇ ದ್ವೇಷಕ್ಕೆ ಕಾರಣ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಮಂಡ್ಯ ಎಸ್.ಪಿ ಯತೀಶ್, ಎ.ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಮುರುಳಿ, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಎ ಮಲ್ಲೇಶ್ ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…