Land dispute: Fatal attack on a person
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನ ಕೊಪ್ಪಲು ಗ್ರಾಮದಲ್ಲಿ ಜರುಗಿದೆ.
ಮೂಲತಃ ಅಕ್ಕಮ್ಮನಕೊಪ್ಪಲು ಗ್ರಾಮದ ವಾಸಿಯಾಗಿದ್ದು ಪ್ರಸ್ತುತ ಬನ್ನೂರಿನಲ್ಲಿ ತನ್ನ ಕುಟುಂಬ ಸಮೇತ ವಾಸವಿರುವ ವೀರಭದ್ರಪ್ಪ ಎಂಬುವರ ಮಗನಾದ 44 ವರ್ಷದ ಮಂಜು ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಭಾನುವಾರ ಸಂಜೆ 9.30 ರ ಸಮಯದಲ್ಲಿ ಹುಲ್ಲೇಗಾಲ ಗ್ರಾಮದ ಪರಿಚಯದವರೊಬ್ಬದ ಗೃಹ ಪ್ರವೇಶ ಕಾರ್ಯಕ್ಕೆ ಬಂದಿದ್ದ ಈತನನ್ನು ಯಾರೋ ದುಷ್ಕರ್ಮಿ ಗಳು ರಾತ್ರಿಯೇ ಕೊಲೆ ಮಾಡಿ ಶವವನ್ನು ಆತನ ಪಾಳು ಮನೆಯ ಜಗುಲಿ ಮೇಲೆ ಹಾಕಿ ಹೋಗಿದ್ದಾರೆ ಎನ್ನಲಾಗಿದೆ, ಇಂದು ಬೆಳಿಗ್ಗೆ ಗ್ರಾಮಸ್ಥರು ಮನೆ ಮುಂದೆ ಶವ ಬಿದ್ದಿರುವುದನ್ನು ಕಂಡು ಪೊಲೀಸ ರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮುಖ ತಲೆ ಭಾಗದಲ್ಲಿ ಹಲ್ಲೆ ನಡೆಸಿರುವ ರಕ್ತದ ಗಾಯಗಳಾಗಿದ್ದು ಜೊತೆಗೆ ನಿಕ್ಕರ್ ವೊಂದನ್ನು ಬಿಟ್ಟು ಆತ ವಿವಸ್ತ್ರನಾಗಿರುವುದು ಕೊಲೆಯ ನಿಗೂಢ ತೆಯನ್ನು ಹೆಚ್ಚಿಸಿದೆ.
ಸುದ್ದಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಅಡಿಷನಲ್ ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪತ್ನಿ ಸುಶೀಲ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…