Land dispute: Fatal attack on a person
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನ ಕೊಪ್ಪಲು ಗ್ರಾಮದಲ್ಲಿ ಜರುಗಿದೆ.
ಮೂಲತಃ ಅಕ್ಕಮ್ಮನಕೊಪ್ಪಲು ಗ್ರಾಮದ ವಾಸಿಯಾಗಿದ್ದು ಪ್ರಸ್ತುತ ಬನ್ನೂರಿನಲ್ಲಿ ತನ್ನ ಕುಟುಂಬ ಸಮೇತ ವಾಸವಿರುವ ವೀರಭದ್ರಪ್ಪ ಎಂಬುವರ ಮಗನಾದ 44 ವರ್ಷದ ಮಂಜು ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ.
ಭಾನುವಾರ ಸಂಜೆ 9.30 ರ ಸಮಯದಲ್ಲಿ ಹುಲ್ಲೇಗಾಲ ಗ್ರಾಮದ ಪರಿಚಯದವರೊಬ್ಬದ ಗೃಹ ಪ್ರವೇಶ ಕಾರ್ಯಕ್ಕೆ ಬಂದಿದ್ದ ಈತನನ್ನು ಯಾರೋ ದುಷ್ಕರ್ಮಿ ಗಳು ರಾತ್ರಿಯೇ ಕೊಲೆ ಮಾಡಿ ಶವವನ್ನು ಆತನ ಪಾಳು ಮನೆಯ ಜಗುಲಿ ಮೇಲೆ ಹಾಕಿ ಹೋಗಿದ್ದಾರೆ ಎನ್ನಲಾಗಿದೆ, ಇಂದು ಬೆಳಿಗ್ಗೆ ಗ್ರಾಮಸ್ಥರು ಮನೆ ಮುಂದೆ ಶವ ಬಿದ್ದಿರುವುದನ್ನು ಕಂಡು ಪೊಲೀಸ ರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮುಖ ತಲೆ ಭಾಗದಲ್ಲಿ ಹಲ್ಲೆ ನಡೆಸಿರುವ ರಕ್ತದ ಗಾಯಗಳಾಗಿದ್ದು ಜೊತೆಗೆ ನಿಕ್ಕರ್ ವೊಂದನ್ನು ಬಿಟ್ಟು ಆತ ವಿವಸ್ತ್ರನಾಗಿರುವುದು ಕೊಲೆಯ ನಿಗೂಢ ತೆಯನ್ನು ಹೆಚ್ಚಿಸಿದೆ.
ಸುದ್ದಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಅಡಿಷನಲ್ ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪತ್ನಿ ಸುಶೀಲ ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…