Mysore
32
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ ಬೆಂಕಿ ಕೆಂಡದ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ಜತೆಗೆ ಅವರನ್ನು ರಕ್ಷಿಸಲು ಮುಂದಾದ ಅವರ ಸಹೋದರಿ ರಾಜೇಶ್ವರಿ ಕೂಡ ಗಾಯಗೊಂಡಿದ್ದಾರೆ.

ಕರಗ ಹೊತ್ತು ಏಳೆಂಟು ಹೆಜ್ಜೆ ಹಾಕಿದ್ದ ದೇವರ ಗುಡ್ಡಪ್ಪ ಬಿ.ಕುಮಾರ್‌ ಅವರ ಕಾಲಿಗೆ ಪಂಚೆ ಸಿಕ್ಕಿಕೊಂಡು ಮುಗ್ಗರಿಸಿ ಮಕಾಡೆ ಬಿದ್ದರು. ಮುತ್ತು ಮಾರಮ್ಮನ ಕರಗ ಅವರ ತಲೆಯ ಮೇಲಿಂದ ಕಳಚಿ ಕೆಂಡದ ಮೇಲೆ ಬಿತ್ತು. ಈ ವೇಳೆ ಕೊಂಡದಲ್ಲಿ ಬಿದ್ದ ಕುಮಾರ್‌ ಅವರನ್ನು ರಕ್ಷಿಸಲು ಹೋಗಿ ಅವರ ಸಹೋದರಿ ರಾಜೇಶ್ವರಿ ಕೂಡ ಗಾಯಗೊಂಡರು. ತಕ್ಷಣ ಪಕ್ಕದಲ್ಲಿದ್ದವರು ಇಬ್ಬರನ್ನೂ ಕೊಂಡದಿಂದ ಮೇಲೆ ಎತ್ತಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಕೆಲವರು ಸುಳ್ಳು ಸುದ್ದಿ ಎಂದು ಹೇಳುತ್ತಿದ್ದರು. ಆದರೆ ಇದು ಸುಳ್ಳು ಸುದ್ದಿ ಅಲ್ಲ. ಶ್ರೀರಂಗಪಟ್ಟಣ ವರದಿಗಾರರಿಂದ ಬಂದ ಮಾಹಿತಿ ಪ್ರಕಾರ ಈ ಘಟನೆ ಆಗಿರುವುದು ನಿಜ. ಹೀಗಾಗಿ ಇದು ಫೇಕ್‌ ನ್ಯೂಸ್‌ ಅಲ್ಲ.

 

Tags:
error: Content is protected !!