ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.
ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ ಬೆಂಕಿ ಕೆಂಡದ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ಜತೆಗೆ ಅವರನ್ನು ರಕ್ಷಿಸಲು ಮುಂದಾದ ಅವರ ಸಹೋದರಿ ರಾಜೇಶ್ವರಿ ಕೂಡ ಗಾಯಗೊಂಡಿದ್ದಾರೆ.
ಕರಗ ಹೊತ್ತು ಏಳೆಂಟು ಹೆಜ್ಜೆ ಹಾಕಿದ್ದ ದೇವರ ಗುಡ್ಡಪ್ಪ ಬಿ.ಕುಮಾರ್ ಅವರ ಕಾಲಿಗೆ ಪಂಚೆ ಸಿಕ್ಕಿಕೊಂಡು ಮುಗ್ಗರಿಸಿ ಮಕಾಡೆ ಬಿದ್ದರು. ಮುತ್ತು ಮಾರಮ್ಮನ ಕರಗ ಅವರ ತಲೆಯ ಮೇಲಿಂದ ಕಳಚಿ ಕೆಂಡದ ಮೇಲೆ ಬಿತ್ತು. ಈ ವೇಳೆ ಕೊಂಡದಲ್ಲಿ ಬಿದ್ದ ಕುಮಾರ್ ಅವರನ್ನು ರಕ್ಷಿಸಲು ಹೋಗಿ ಅವರ ಸಹೋದರಿ ರಾಜೇಶ್ವರಿ ಕೂಡ ಗಾಯಗೊಂಡರು. ತಕ್ಷಣ ಪಕ್ಕದಲ್ಲಿದ್ದವರು ಇಬ್ಬರನ್ನೂ ಕೊಂಡದಿಂದ ಮೇಲೆ ಎತ್ತಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿಯನ್ನು ಕೆಲವರು ಸುಳ್ಳು ಸುದ್ದಿ ಎಂದು ಹೇಳುತ್ತಿದ್ದರು. ಆದರೆ ಇದು ಸುಳ್ಳು ಸುದ್ದಿ ಅಲ್ಲ. ಶ್ರೀರಂಗಪಟ್ಟಣ ವರದಿಗಾರರಿಂದ ಬಂದ ಮಾಹಿತಿ ಪ್ರಕಾರ ಈ ಘಟನೆ ಆಗಿರುವುದು ನಿಜ. ಹೀಗಾಗಿ ಇದು ಫೇಕ್ ನ್ಯೂಸ್ ಅಲ್ಲ.
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಳಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…