ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ.
ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ.
ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ ಜಮೀನಿನಲ್ಲೇ ಉಳಿದಿದ್ದು, ಅನ್ನದಾತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬೆಳವಣಿಗೆಗಳ ನಡುವೆ ಮೈಶುಗರ್ ಆಡಳಿತ ಮಂಡಳಿ 68 ಮಂದಿ ಕಬ್ಬು ಕಟಾವು ಮೇಸ್ತ್ರಿಗಳಿಗೆ ನೋಟಿಸ್ ನೀಡಿದೆ.
ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಮಾಡಲು ಕಾರ್ಮಿಕರನ್ನು ಕರೆತರಲು ನೂರಾರು ಮಂದಿ ಮೇಸ್ತ್ರಿಗಳಿಗೆ ಮುಂಗಡ ಹಣ ನೀಡಲಾಗಿದೆ. ಆದರೆ ಮುಂಗಡ ಹಣ ಪಡೆದಿರುವ ಮೇಸ್ತ್ರಿಗಳು ಕಾರ್ಮಿಕರನ್ನೇ ಕರೆತರದೇ ನಿರ್ಲಕ್ಷ್ಯ ತೋರಿದ್ದಾರೆ.
ಈವರೆಗೂ ಕಾರ್ಮಿಕರನ್ನು ಕರೆತರದ ಮೇಸ್ತ್ರಿಗಳಿಗೆ ಮೈಶುಗರ್ ಆಡಳಿತ ಮಂಡಳಿ ಕೇಸು ದಾಖಲಿಸುವ ಎಚ್ಚರಿಕೆಯೊಂದಿಗೆ ನೋಟಿಸ್ ಜಾರಿಗೊಳಿಸಿದೆ.
ಇದರ ನಡುವೆ ಹಲವೆಡೆ ಕಬ್ಬಿಗೆ 14-15 ತಿಂಗಳಾಗಿದ್ದು, ಕೊಯ್ಲು ಆಗದಿರುವುದರಿಂದ ತೂಕ ಹಾಗೂ ಇಳುವರಿ ಕಡಿಮೆಯಾಗುವ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೇಸ್ತ್ರಿಗಳು ಆದಷ್ಟು ಬೇಗ ಕಾರ್ಮಿಕರನ್ನು ಕರೆತಂದು ಕಬ್ಬು ಕಟಾವು ಮಾಡಿಸಲಿ ಎಂದು ರೈತರು ಆಗ್ರಹಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…