ಮಂಡ್ಯ

ಮೈಶುಗರ್‌ಗೆ ಆರಂಭದಲ್ಲೇ ಸಂಕಷ್ಟ: ಕಂಗಾಲಾದ ಅನ್ನದಾತರು

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್‌ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ.

ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ.

ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ ಜಮೀನಿನಲ್ಲೇ ಉಳಿದಿದ್ದು, ಅನ್ನದಾತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬೆಳವಣಿಗೆಗಳ ನಡುವೆ ಮೈಶುಗರ್‌ ಆಡಳಿತ ಮಂಡಳಿ 68 ಮಂದಿ ಕಬ್ಬು ಕಟಾವು ಮೇಸ್ತ್ರಿಗಳಿಗೆ ನೋಟಿಸ್‌ ನೀಡಿದೆ.

ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಮಾಡಲು ಕಾರ್ಮಿಕರನ್ನು ಕರೆತರಲು ನೂರಾರು ಮಂದಿ ಮೇಸ್ತ್ರಿಗಳಿಗೆ ಮುಂಗಡ ಹಣ ನೀಡಲಾಗಿದೆ. ಆದರೆ ಮುಂಗಡ ಹಣ ಪಡೆದಿರುವ ಮೇಸ್ತ್ರಿಗಳು ಕಾರ್ಮಿಕರನ್ನೇ ಕರೆತರದೇ ನಿರ್ಲಕ್ಷ್ಯ ತೋರಿದ್ದಾರೆ.

ಈವರೆಗೂ ಕಾರ್ಮಿಕರನ್ನು ಕರೆತರದ ಮೇಸ್ತ್ರಿಗಳಿಗೆ ಮೈಶುಗರ್‌ ಆಡಳಿತ ಮಂಡಳಿ ಕೇಸು ದಾಖಲಿಸುವ ಎಚ್ಚರಿಕೆಯೊಂದಿಗೆ ನೋಟಿಸ್‌ ಜಾರಿಗೊಳಿಸಿದೆ.

ಇದರ ನಡುವೆ ಹಲವೆಡೆ ಕಬ್ಬಿಗೆ 14-15 ತಿಂಗಳಾಗಿದ್ದು, ಕೊಯ್ಲು ಆಗದಿರುವುದರಿಂದ ತೂಕ ಹಾಗೂ ಇಳುವರಿ ಕಡಿಮೆಯಾಗುವ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೇಸ್ತ್ರಿಗಳು ಆದಷ್ಟು ಬೇಗ ಕಾರ್ಮಿಕರನ್ನು ಕರೆತಂದು ಕಬ್ಬು ಕಟಾವು ಮಾಡಿಸಲಿ ಎಂದು ರೈತರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago