ಮಂಡ್ಯ

ಮೈಶುಗರ್‌ಗೆ ಆರಂಭದಲ್ಲೇ ಸಂಕಷ್ಟ: ಕಂಗಾಲಾದ ಅನ್ನದಾತರು

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್‌ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ.

ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ.

ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ ಜಮೀನಿನಲ್ಲೇ ಉಳಿದಿದ್ದು, ಅನ್ನದಾತರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬೆಳವಣಿಗೆಗಳ ನಡುವೆ ಮೈಶುಗರ್‌ ಆಡಳಿತ ಮಂಡಳಿ 68 ಮಂದಿ ಕಬ್ಬು ಕಟಾವು ಮೇಸ್ತ್ರಿಗಳಿಗೆ ನೋಟಿಸ್‌ ನೀಡಿದೆ.

ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಮಾಡಲು ಕಾರ್ಮಿಕರನ್ನು ಕರೆತರಲು ನೂರಾರು ಮಂದಿ ಮೇಸ್ತ್ರಿಗಳಿಗೆ ಮುಂಗಡ ಹಣ ನೀಡಲಾಗಿದೆ. ಆದರೆ ಮುಂಗಡ ಹಣ ಪಡೆದಿರುವ ಮೇಸ್ತ್ರಿಗಳು ಕಾರ್ಮಿಕರನ್ನೇ ಕರೆತರದೇ ನಿರ್ಲಕ್ಷ್ಯ ತೋರಿದ್ದಾರೆ.

ಈವರೆಗೂ ಕಾರ್ಮಿಕರನ್ನು ಕರೆತರದ ಮೇಸ್ತ್ರಿಗಳಿಗೆ ಮೈಶುಗರ್‌ ಆಡಳಿತ ಮಂಡಳಿ ಕೇಸು ದಾಖಲಿಸುವ ಎಚ್ಚರಿಕೆಯೊಂದಿಗೆ ನೋಟಿಸ್‌ ಜಾರಿಗೊಳಿಸಿದೆ.

ಇದರ ನಡುವೆ ಹಲವೆಡೆ ಕಬ್ಬಿಗೆ 14-15 ತಿಂಗಳಾಗಿದ್ದು, ಕೊಯ್ಲು ಆಗದಿರುವುದರಿಂದ ತೂಕ ಹಾಗೂ ಇಳುವರಿ ಕಡಿಮೆಯಾಗುವ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೇಸ್ತ್ರಿಗಳು ಆದಷ್ಟು ಬೇಗ ಕಾರ್ಮಿಕರನ್ನು ಕರೆತಂದು ಕಬ್ಬು ಕಟಾವು ಮಾಡಿಸಲಿ ಎಂದು ರೈತರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

5 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

5 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

5 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

7 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

7 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

7 hours ago