ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಇದನ್ನೂ ಓದಿ:-ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ
ಬೆಂಗಳೂರಿನಲ್ಲಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ ನೀಡಿರುವ ಮಾಹಿತಿ ಆಧರಿಸಿ ಈ ಉತ್ತರವನ್ನು ಒದಗಿಸಲಾಗಿದೆ.
ಹೆದ್ದಾರಿಯಲ್ಲಿ ಮೂರು ಟೋಲ್ ಕೇಂದ್ರಗಳಿದ್ದು, ೨೦೨೨-೨೩ರಿಂದ ೨೦೨೫-೨೬ರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಿಮಿಣಿಕೆ ಕೇಂದ್ರದಲ್ಲಿ ೨೮೨.೧೪ ಕೋಟಿ ರೂ., ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಕೇಂದ್ರದಲ್ಲಿ ೨೪೮.೪೨ ಕೋಟಿ ರೂ.ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರಿನ ಕೇಂದ್ರದಲ್ಲಿ ೩೨೫.೨೩ ಕೋಟಿ ರೂ. ಟೋಲ್ ಸಂಗ್ರಹವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ನೀಡಿರುವ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…